<p><strong>ದೇವದುರ್ಗ</strong>: ಜಿಲ್ಲಾ ಕಾಂಗ್ರೆಸ್ ಮುಖಂಡರು ವೈಯಕ್ತಿಕ ಪ್ರತಿಷ್ಠೆಗೆ ಪಕ್ಷವನ್ನು ಬಲಿಕೊಡುತ್ತಿರುವುದು ಪಕ್ಷ ಮತ್ತಷ್ಟು ನೆಲಕಚ್ಚುವಂತೆ ಮಾಡುತ್ತಿರುವುದು ತೀವ್ರ ಬೇಸರ ತಂದಿದೆ ಎಂದು ಮಾಜಿ ಪುರಸಭೆ ಅಧ್ಯಕ್ಷ ರಂಗಪ್ಪ ಗೋಸಲ್ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಬಣ ರಾಜಕೀಯದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಪಕ್ಷಕ್ಕಾಗಿ ಬೂತ್ ಮಟ್ಟದಲ್ಲಿ ದುಡಿದು ಪಕ್ಷ ವಿರೋಧಿ ಮತ್ತು ರೈತರಿಗೆ ಮೋಸ ಮಾಡಿದನ್ನು ಪ್ರಶ್ನಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವಜಾಗೊಳಿಸಿ ತಮ್ಮ ಚಾಕರಿ ಮಾಡುವ ದಲ್ಲಾಳಿ ಕಾರ್ಯಕರ್ತರಿಗೆ ಬ್ಲಾಕ್ ಕಾಂಗ್ರೆಸ್ ಹುದ್ದೆ ನೀಡಿದ್ದಾರೆ’ ಎಂದರು.</p>.<p>‘ಪಕ್ಷಕ್ಕಾಗಿ ಬೂತ್ ಮಟ್ಟದಲ್ಲಿ ದುಡಿದು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ ಕಾರ್ಯಕರ್ತರನ್ನು ಕಳೆದ ಎರಡುವರೆ ವರ್ಷದಿಂದ ನಿರ್ಲಕ್ಷಿಸಿ, ದಲ್ಲಾಳಿಗಳಂತೆ ವರ್ತಿಸುತ್ತಿರುವ ಪಕ್ಷಕ್ಕೆ ದುಡಿಯದ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಿದ್ದಾರೆ ಎಂದು ಆಪದಾಸಿದರು.</p>.<p>ವಕೀಲ ಮರಿಲಿಂಗಪ್ಪ ಕೋಳೂರ,‘ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ದೇವದುರ್ಗದಲ್ಲಿ ಮೇಲ್ಜಾತಿಯವರಿಗೆ ವಿವಿಧ ಹುದ್ದೆಗಳಿಗೆ ನೇಮಕ ಮಾಡುತ್ತಿದ್ದು, ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇವದುರ್ಗದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳು ಬೇಕಾಗಿಲ್ಲವೆ? ಎಂದು ಪ್ರಶ್ನಿಸಿದರು.</p>.<p>‘ಜಿಲ್ಲಾಧ್ಯಕ್ಷರ ಕಡೆಗಣಿಸಿ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಿರುವುದು ಸ್ಥಳೀಯ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ಗೆ ಈ ಕುರಿತು ದೂರು ನೀಡುತ್ತೇವೆ. ಪ್ರಸಕ್ತ ವರ್ಷ ಸಾಲು ಸಾಲು ಸ್ಥಳೀಯ ಚುನಾವಣೆಗಳು ಎದುರಾಗಲಿವೇ ಪಕ್ಷದಲ್ಲಿನ ಬಣ ರಾಜಕೀಯಕ್ಕೆ ಕಡಿವಾಣ ಹಾಕಿ. ನೇಮಕಗೊಂಡ ಮತ್ತು ನಾಮ ನಿರ್ದೇಶನಗೊಂಡ ಎಲ್ಲಾ ಹುದ್ದೆಗಳನ್ನು ವಜಗೊಳಿಸಿ ಮರು ನೇಮಕಕ್ಕೆ ನಿಯೋಗ ಕೊಂಡೊಯ್ಯುತ್ತೇವೆ’ ಎಂದು ತಿಳಿಸಿದರು.</p>.<p>ಮುಖಂಡರಾದ ರಾಜ ವಾಸುದೇವ ನಾಯಕ, ಶಿವರಾಜ ನಾಯಕ ಕರಿಗುಡ್ಡ, ಯಕ್ಬಾಲ್ ಸಾಬ್ ಹೌದೊಡ್ಡಿ, ಪುರಸಭೆ ಮಾಜಿ ಸದಸ್ಯ ಮಾನಪ್ಪ ಮೇಸ್ತ್ರಿ, ಸುಲ್ತಾನ್ ಬಾಬು, ಅಯ್ಯಪ್ಪ ಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ</strong>: ಜಿಲ್ಲಾ ಕಾಂಗ್ರೆಸ್ ಮುಖಂಡರು ವೈಯಕ್ತಿಕ ಪ್ರತಿಷ್ಠೆಗೆ ಪಕ್ಷವನ್ನು ಬಲಿಕೊಡುತ್ತಿರುವುದು ಪಕ್ಷ ಮತ್ತಷ್ಟು ನೆಲಕಚ್ಚುವಂತೆ ಮಾಡುತ್ತಿರುವುದು ತೀವ್ರ ಬೇಸರ ತಂದಿದೆ ಎಂದು ಮಾಜಿ ಪುರಸಭೆ ಅಧ್ಯಕ್ಷ ರಂಗಪ್ಪ ಗೋಸಲ್ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಬಣ ರಾಜಕೀಯದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಪಕ್ಷಕ್ಕಾಗಿ ಬೂತ್ ಮಟ್ಟದಲ್ಲಿ ದುಡಿದು ಪಕ್ಷ ವಿರೋಧಿ ಮತ್ತು ರೈತರಿಗೆ ಮೋಸ ಮಾಡಿದನ್ನು ಪ್ರಶ್ನಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವಜಾಗೊಳಿಸಿ ತಮ್ಮ ಚಾಕರಿ ಮಾಡುವ ದಲ್ಲಾಳಿ ಕಾರ್ಯಕರ್ತರಿಗೆ ಬ್ಲಾಕ್ ಕಾಂಗ್ರೆಸ್ ಹುದ್ದೆ ನೀಡಿದ್ದಾರೆ’ ಎಂದರು.</p>.<p>‘ಪಕ್ಷಕ್ಕಾಗಿ ಬೂತ್ ಮಟ್ಟದಲ್ಲಿ ದುಡಿದು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ ಕಾರ್ಯಕರ್ತರನ್ನು ಕಳೆದ ಎರಡುವರೆ ವರ್ಷದಿಂದ ನಿರ್ಲಕ್ಷಿಸಿ, ದಲ್ಲಾಳಿಗಳಂತೆ ವರ್ತಿಸುತ್ತಿರುವ ಪಕ್ಷಕ್ಕೆ ದುಡಿಯದ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಿದ್ದಾರೆ ಎಂದು ಆಪದಾಸಿದರು.</p>.<p>ವಕೀಲ ಮರಿಲಿಂಗಪ್ಪ ಕೋಳೂರ,‘ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ದೇವದುರ್ಗದಲ್ಲಿ ಮೇಲ್ಜಾತಿಯವರಿಗೆ ವಿವಿಧ ಹುದ್ದೆಗಳಿಗೆ ನೇಮಕ ಮಾಡುತ್ತಿದ್ದು, ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇವದುರ್ಗದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳು ಬೇಕಾಗಿಲ್ಲವೆ? ಎಂದು ಪ್ರಶ್ನಿಸಿದರು.</p>.<p>‘ಜಿಲ್ಲಾಧ್ಯಕ್ಷರ ಕಡೆಗಣಿಸಿ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಿರುವುದು ಸ್ಥಳೀಯ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ಗೆ ಈ ಕುರಿತು ದೂರು ನೀಡುತ್ತೇವೆ. ಪ್ರಸಕ್ತ ವರ್ಷ ಸಾಲು ಸಾಲು ಸ್ಥಳೀಯ ಚುನಾವಣೆಗಳು ಎದುರಾಗಲಿವೇ ಪಕ್ಷದಲ್ಲಿನ ಬಣ ರಾಜಕೀಯಕ್ಕೆ ಕಡಿವಾಣ ಹಾಕಿ. ನೇಮಕಗೊಂಡ ಮತ್ತು ನಾಮ ನಿರ್ದೇಶನಗೊಂಡ ಎಲ್ಲಾ ಹುದ್ದೆಗಳನ್ನು ವಜಗೊಳಿಸಿ ಮರು ನೇಮಕಕ್ಕೆ ನಿಯೋಗ ಕೊಂಡೊಯ್ಯುತ್ತೇವೆ’ ಎಂದು ತಿಳಿಸಿದರು.</p>.<p>ಮುಖಂಡರಾದ ರಾಜ ವಾಸುದೇವ ನಾಯಕ, ಶಿವರಾಜ ನಾಯಕ ಕರಿಗುಡ್ಡ, ಯಕ್ಬಾಲ್ ಸಾಬ್ ಹೌದೊಡ್ಡಿ, ಪುರಸಭೆ ಮಾಜಿ ಸದಸ್ಯ ಮಾನಪ್ಪ ಮೇಸ್ತ್ರಿ, ಸುಲ್ತಾನ್ ಬಾಬು, ಅಯ್ಯಪ್ಪ ಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>