ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತುರ್ವಿಹಾಳದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿ, 'ಪ್ರತಾಪಗೌಡ ಪಾಟೀಲ ಅವರನ್ನು ಆಯ್ಕೆ ಮಾಡಿ, ಈ ಭಾಗದ ಸೇವೆ ಮಾಡಲು ಅವಕಾಶ ಕೊಡಿ. ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗುವುದು. ಚುನಾವಣೆ ಬಳಿಕ ಎಲ್ಲ ರೀತಿಯ ಬೇಡಿಕೆಗಳನ್ನು ಈಡೇರಿಸಿ, ಅಭಿವೃದ್ಧಿ ಮಾಡಲಾಗುವುದು' ಎಂದು ಭರವಸೆ ನೀಡಿದರು.