<p><strong>ರಾಯಚೂರು:</strong> ‘ಅಧಿಕಾರ ಶಾಶ್ವತವಲ್ಲ, ಎಲ್ಲಿಯವರೆಗೆ ಹೈಕಮಾಂಡ್ ಇದೆಯೋ ಅಲ್ಲಿಯವರೆಗೆ ಅಧಿಕಾರ ಇರುತ್ತದೆ. ಇಲ್ಲದೇ ಇದ್ದರೆ ಸರ್ಕಾರವೂ ಇರಲ್ಲ, ನನ್ನ ಮಂತ್ರಿ ಸ್ಥಾನವೂ ಇರಲ್ಲ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿದರು.</p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಶಾಶ್ವತವಲ್ಲ ಎಂದು ಹೇಳಿರುವುದಲ್ಲಿ ವೈರಾಗ್ಯದ ನುಡಿಗಿಳಿಲ್ಲ. ಎಲ್ಲಿಯವರೆಗೆ ಜನರ ಆರ್ಶೀವಾದ ಇರುತ್ತದೆಯೋ ಅಲ್ಲಿಯವರೆಗೆ ಅಧಿಕಾರ ಇರುತ್ತದೆ. ಎಲ್ಲದಕ್ಕೂ ಹೈ ಕಮಾಂಡ್ ತೀರ್ಮಾನವೇ ಅಂತಿಮ’ ಎಂದು ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p><p> ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಚಿವ ಸತೀಶ ಜಾರಕಿಹೊಳೆ ಅವರ ಹೇಳಿಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು. ‘ಸತೀಶ ಅವರನ್ನೇ ಕೇಳಿ’ ಎಂದಷ್ಟೇ ಹೇಳಿದರು.</p><p>‘ಬ್ರೆಕ್ ಫಾಸ್ಟ್, ಲಂಚ್ ಮೀಟಿಂಗ್ ಗಳು ನಡೆಯುತ್ತವೆ. ಸಿಎಂ ಮತ್ತು ಡಿಸಿಎಂ ಸೇರಿದಂತೆ ಅನೇಕರು ಮಾಡುತ್ತಾರೆ. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಯಾರು ಏನೇ ಹೇಳಿದರೂ ಹೈ ಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಅಧಿಕಾರ ಶಾಶ್ವತವಲ್ಲ, ಎಲ್ಲಿಯವರೆಗೆ ಹೈಕಮಾಂಡ್ ಇದೆಯೋ ಅಲ್ಲಿಯವರೆಗೆ ಅಧಿಕಾರ ಇರುತ್ತದೆ. ಇಲ್ಲದೇ ಇದ್ದರೆ ಸರ್ಕಾರವೂ ಇರಲ್ಲ, ನನ್ನ ಮಂತ್ರಿ ಸ್ಥಾನವೂ ಇರಲ್ಲ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿದರು.</p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಶಾಶ್ವತವಲ್ಲ ಎಂದು ಹೇಳಿರುವುದಲ್ಲಿ ವೈರಾಗ್ಯದ ನುಡಿಗಿಳಿಲ್ಲ. ಎಲ್ಲಿಯವರೆಗೆ ಜನರ ಆರ್ಶೀವಾದ ಇರುತ್ತದೆಯೋ ಅಲ್ಲಿಯವರೆಗೆ ಅಧಿಕಾರ ಇರುತ್ತದೆ. ಎಲ್ಲದಕ್ಕೂ ಹೈ ಕಮಾಂಡ್ ತೀರ್ಮಾನವೇ ಅಂತಿಮ’ ಎಂದು ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p><p> ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಚಿವ ಸತೀಶ ಜಾರಕಿಹೊಳೆ ಅವರ ಹೇಳಿಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು. ‘ಸತೀಶ ಅವರನ್ನೇ ಕೇಳಿ’ ಎಂದಷ್ಟೇ ಹೇಳಿದರು.</p><p>‘ಬ್ರೆಕ್ ಫಾಸ್ಟ್, ಲಂಚ್ ಮೀಟಿಂಗ್ ಗಳು ನಡೆಯುತ್ತವೆ. ಸಿಎಂ ಮತ್ತು ಡಿಸಿಎಂ ಸೇರಿದಂತೆ ಅನೇಕರು ಮಾಡುತ್ತಾರೆ. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಯಾರು ಏನೇ ಹೇಳಿದರೂ ಹೈ ಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>