ರಾಯಚೂರು: ದೇವದುರ್ಗ ತಾಲ್ಲೂಕಿನ ಗಬ್ಬೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭಕ್ಕೆ ಬಂದಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಥಳೀಯ ಬೂದಿಬಸವೇಶ್ವರ ಮಠದ ದರ್ಶನ ಪಡೆದರು.
ಮಠದಿಂದ ಹೊರಬಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಾದರಕ್ಷೆಯನ್ನು ತಮ್ಮ ಕೈಯಲ್ಲಿ ಹಿಡಿದು ತೊಡಿಸಿದರು.
ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮರಳುವಾಗ ಸಿದ್ದರಾಮಯ್ಯ ಅವರ ಕನ್ನಡಕವೂ ಕಳೆದುಹೋಯಿತು.