ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ: ನಳೀನ್ ಕುಮಾರ್

Last Updated 20 ಫೆಬ್ರುವರಿ 2020, 12:32 IST
ಅಕ್ಷರ ಗಾತ್ರ

ರಾಯಚೂರು: ‌ಕಾಂಗ್ರೆಸ್ ಪಕ್ಷದ ನಾಯಕರ ಬೌದ್ದಿಕ ಮಟ್ಟ ಕುಸಿದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ್ ಕಟೀಲ್ ಟೀಕಿಸಿದರು. ನಗರದಲ್ಲಿ ನೂತನ ಬಿಜೆಪಿ ಜಿಲ್ಲಾ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಹಾಗೂ ಕಾಯ್ದೆಗಳನ್ನು ವಿರೋಧಿಸುವ ಉದ್ದೇಶಕ್ಕಾಗಿ ಕಾಂಗ್ರೆಸ್ವಿರೋಧಿಸುತ್ತಿದೆ ಎಂದರು.

ಬಿಜೆಪಿಯಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಬಜೆಟ್ ಕುರಿತು ಚರ್ಚಿಸಲು ಅವರೆಲ್ಲ ಸೇರಿದ್ದರು. ಜಗದೀಶ ಶೆಟ್ಟರ್ಮನೆಯಲ್ಲಿ ಶಾಸಕರು ಭೇಟಿಯಾಗಿ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಅದು ಬಿಎಸ್‌ವೈ ಅವರ ವಿರುದ್ಧದ ಸಭೆ ಎಂದು ಭಾವಿಸಬೇಕಿಲ್ಲ ಎಂದು ತಿಳಿಸಿದರು.

ಬಿಜೆಪಿ ಶಾಸಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು ಸೌಜನ್ಯದಿಂದ ಕೂಡಿದ್ದು. ಅವರು ಮಾಜಿ ಮುಖ್ಯಮಂತ್ರಿ ಆಗಿದ್ದರಿಂದ ಭೇಟಿಯಾಗಿ ಮಾತನಾಡಿರಬಹುದು. ಬಿಜೆಪಿ ಶಾಸಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ಸಚಿವ ಸ್ಥಾನ ನೀಡುವ ವಿಷಯ ಇದೆ. ವಿಶೇಷ ಸಂದರ್ಭದಲ್ಲಿ ಇನ್ನೂ ಸಚಿವ ಸ್ಥಾನಗಳ ಭರ್ತಿ ಮುಗಿದಿಲ್ಲ. ರಾಜ್ಯದಲ್ಲಿ ಯಾವುದೇ ಪ್ರದೇಶವನ್ನು ನಿರ್ಲಕ್ಷಿಸಿಲ್ಲ. ಎಲ್ಲಾ ಭಾಗಕ್ಕೂ ಸಮಾನ ನ್ಯಾಯ ಒದಗಿಸುತ್ತೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT