<p><strong>ಮಸ್ಕಿ</strong>: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್, ಅಡಿಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಗುರುವಾರ ಮಸ್ಕಿಯಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.</p>.<p>ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಕಾಂಗ್ರೆಸ್ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ನಾಯಕ ಅವರು ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.</p>.<p>ಪ್ರತಿಭಟನಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.</p>.<p>ಬಸವೇಶ್ವರ ವೃತ್ತದಿಂದ ಆರಂಭವಾದ ಜಾಥಾವು ವಾಲ್ಮೀಕಿ ವೃತ್ತ, ಕನಕವೃತ್ತ, ಮುಖ್ಯ ಬಜಾರ. ಅಶೋಕ ವೃತ್ತ, ಹಳೆಯ ಬಸ್ ನಿಲ್ದಾಣದ ಮೂಲಕ ಸಾಗಿ ಬಸವೇಶ್ವರ ನಗರದಲ್ಲಿನ ಕಾಂಗ್ರೆಸ್ ಕಚೇರಿಗೆ ಆಗಮಿಸಿತು.</p>.<p>ಶಾಸಕರಾದ ಆರ್. ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ. ಎಚ್.ಬಿ. ಮುರಾರಿ, ಸಿದ್ದಣ್ಣ ಹೂವಿನಭಾವಿ. ಆರ್. ಸಿದ್ದನಗೌಡ ಸೇರಿದಂತೆ ಅನೇಕ ಮುಖಂಡರು ಪಕ್ಷದ ವಿವಿಧ ಮೊರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್, ಅಡಿಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಗುರುವಾರ ಮಸ್ಕಿಯಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.</p>.<p>ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಕಾಂಗ್ರೆಸ್ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ನಾಯಕ ಅವರು ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.</p>.<p>ಪ್ರತಿಭಟನಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.</p>.<p>ಬಸವೇಶ್ವರ ವೃತ್ತದಿಂದ ಆರಂಭವಾದ ಜಾಥಾವು ವಾಲ್ಮೀಕಿ ವೃತ್ತ, ಕನಕವೃತ್ತ, ಮುಖ್ಯ ಬಜಾರ. ಅಶೋಕ ವೃತ್ತ, ಹಳೆಯ ಬಸ್ ನಿಲ್ದಾಣದ ಮೂಲಕ ಸಾಗಿ ಬಸವೇಶ್ವರ ನಗರದಲ್ಲಿನ ಕಾಂಗ್ರೆಸ್ ಕಚೇರಿಗೆ ಆಗಮಿಸಿತು.</p>.<p>ಶಾಸಕರಾದ ಆರ್. ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ. ಎಚ್.ಬಿ. ಮುರಾರಿ, ಸಿದ್ದಣ್ಣ ಹೂವಿನಭಾವಿ. ಆರ್. ಸಿದ್ದನಗೌಡ ಸೇರಿದಂತೆ ಅನೇಕ ಮುಖಂಡರು ಪಕ್ಷದ ವಿವಿಧ ಮೊರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>