‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ತೆಗೆದು ಹಾಕಲು ಪ್ರಯತ್ನಿಸುತ್ತಿದ್ದೇನೆ. ಶಾಸಕನಾಗಿ ಆಯ್ಕೆಯಾದ ನಂತರ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಶಿಕ್ಷಣ, ಉದ್ಯೋಗ, ವಸತಿ, ರಸ್ತೆ, ಕುಡಿಯುವ ನೀರು, ಶೌಚಾಲಯ ನಿರ್ಮಾಣ ಹಾಗೂ ಗ್ರಾಮೀಣ ಪ್ರದೇಶಕ್ಕೆ ಸಾರಿಗೆ ಸೌಲಭ್ಯ ಒದಗಿಸಲು ಸಾಕಷ್ಟು ಅನುದಾನ ತಂದಿದ್ದೇನೆ’ ಎಂದು ಪತ್ರಿಕೆಗೆ ತಿಳಿಸಿದರು.