<p><strong>ಸಿರವಾರ</strong>: ‘ಹಿಂದುಳಿದ ಸಮಾಜಗಳು ಅಭಿವೃದ್ದಿಯಾಗಬೇಕೆಂದರೆ ಹೋರಾಟ ಮಾಡಿಯೇ ಹಕ್ಕುಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಚಿತ್ತಾಪುರ ತಾಲ್ಲೂಕಿನ ಕರದಾಳದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈಗೊಂಡಿರುವ ಈಡಿಗ–ಬಿಲ್ಲವ ಸಮಾಜದ 700 ಕಿ.ಮೀ ಪಾದಯಾತ್ರೆ ಪಟ್ಟಣಕ್ಕೆ ಆಗಮಿಸಿದ ವೇಳೆ ಅವರು ಮಾತನಾಡಿದರು.</p>.<p>‘26 ಪಂಗಡಗಳನ್ನು ಹೊಂದಿರುವ ಸಮಾಜದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿ ರುವ ಪಾದಯಾತ್ರೆಯು ಚಿತ್ತಾಪುರ ತಾಲ್ಲೂಕಿನ ಕರದಾಳದ ಪೀಠದಿಂದ ಪ್ರಾರಂಭವಾಗಿದ್ದು, ರಾಜ್ಯದ ಪ್ರಮುಖ 8 ಜಿಲ್ಲೆಗಳ ಮುಖಾಂತರ ರಾಜಧಾನಿ ಬೆಂಗಳೂರು ತಲುಪಲಿದೆ. ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ’ ಎಂದರು.</p>.<p>‘ಹಿಂದುಳಿದ ವರ್ಗಗಳ ಹೆಸರು ಬಳಸಿಕೊಂಡು ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ಸಮಾಜವನ್ನು ಕಡೆಗಣಿಸುತ್ತಿದೆ. ರಾಜಕೀಯ ದುರುದ್ದೇಶದಿಂದ ಸಮಾಜದ ಕುಲಕಸಬು ಕಸಿದುಕೊಂಡು, ಕುಟುಂಬಗಳನ್ನು ಬೀದಿಗೆ ತಂದಿದೆ’ ಎಂದು ಹೇಳಿದರು.</p>.<p>ಗುರುವಾರ ಸಂಜೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಾದಯಾತ್ರೆ ತಂಡವನ್ನು ಮಹಿಳೆಯರ ಕುಂಭ–ಕಳಸ, ಡೊಳ್ಳು ಕುಣಿತ, ಬಾಜಾ–ಭಜಂತ್ರಿಯೊಂದಿಗೆ ಸಮಾಜದ ಮುಖಂಡರು ಸ್ವಾಗ ತಿಸಿದರು.</p>.<p>ಮುಖ್ಯರಸ್ತೆಯುದ್ದಕ್ಕೂ ಯುವಕರ ನೃತ್ಯ, ಹಾಡುಗಳಿಂದ ಮೆರವಣಿಗೆ ಮೂಲಕ ಪಾದಯಾತ್ರೆ ಮುಂದೆ ಸಾಗಿತು.</p>.<p>ಶುಕ್ರವಾರ ಬೆಳಿಗ್ಗೆ ಪಟ್ಟಣದಿಂದ ಹಳ್ಳಿ ಹೊಸೂರು ಕಡೆಗೆ ಪಾದಯಾತ್ರೆ ಸಾಗಿತು.</p>.<p>ಸಮಾಜದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಶೋಕ ಗುತ್ತೇದಾರ ಚಾಗಭಾವಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ದೇವತಗಲ್, ಉಪಾಧ್ಯಕ್ಷ ಕೆ.ಶ್ರೀನಿವಾಸ ಕಡದಿನ್ನಿ ಕ್ಯಾಂಪ್, ಧನಂಜಯಗೌಡ ಹೀರಾ, ಜಂಬಣ್ಣ ಗಣದಿನ್ನಿ, ಶಿವಪುತ್ರಗೌಡ, ಲಕ್ಷ್ಮಣ ಮುಚ್ಚಳಗುಡ್ಡ ಕ್ಯಾಂಪ್ ಸೇರಿದಂತೆ ವಿವಿಧ ಹಿಂದುಳಿದ ಸಮಾಜಗಳ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ‘ಹಿಂದುಳಿದ ಸಮಾಜಗಳು ಅಭಿವೃದ್ದಿಯಾಗಬೇಕೆಂದರೆ ಹೋರಾಟ ಮಾಡಿಯೇ ಹಕ್ಕುಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಚಿತ್ತಾಪುರ ತಾಲ್ಲೂಕಿನ ಕರದಾಳದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈಗೊಂಡಿರುವ ಈಡಿಗ–ಬಿಲ್ಲವ ಸಮಾಜದ 700 ಕಿ.ಮೀ ಪಾದಯಾತ್ರೆ ಪಟ್ಟಣಕ್ಕೆ ಆಗಮಿಸಿದ ವೇಳೆ ಅವರು ಮಾತನಾಡಿದರು.</p>.<p>‘26 ಪಂಗಡಗಳನ್ನು ಹೊಂದಿರುವ ಸಮಾಜದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿ ರುವ ಪಾದಯಾತ್ರೆಯು ಚಿತ್ತಾಪುರ ತಾಲ್ಲೂಕಿನ ಕರದಾಳದ ಪೀಠದಿಂದ ಪ್ರಾರಂಭವಾಗಿದ್ದು, ರಾಜ್ಯದ ಪ್ರಮುಖ 8 ಜಿಲ್ಲೆಗಳ ಮುಖಾಂತರ ರಾಜಧಾನಿ ಬೆಂಗಳೂರು ತಲುಪಲಿದೆ. ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ’ ಎಂದರು.</p>.<p>‘ಹಿಂದುಳಿದ ವರ್ಗಗಳ ಹೆಸರು ಬಳಸಿಕೊಂಡು ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ಸಮಾಜವನ್ನು ಕಡೆಗಣಿಸುತ್ತಿದೆ. ರಾಜಕೀಯ ದುರುದ್ದೇಶದಿಂದ ಸಮಾಜದ ಕುಲಕಸಬು ಕಸಿದುಕೊಂಡು, ಕುಟುಂಬಗಳನ್ನು ಬೀದಿಗೆ ತಂದಿದೆ’ ಎಂದು ಹೇಳಿದರು.</p>.<p>ಗುರುವಾರ ಸಂಜೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಾದಯಾತ್ರೆ ತಂಡವನ್ನು ಮಹಿಳೆಯರ ಕುಂಭ–ಕಳಸ, ಡೊಳ್ಳು ಕುಣಿತ, ಬಾಜಾ–ಭಜಂತ್ರಿಯೊಂದಿಗೆ ಸಮಾಜದ ಮುಖಂಡರು ಸ್ವಾಗ ತಿಸಿದರು.</p>.<p>ಮುಖ್ಯರಸ್ತೆಯುದ್ದಕ್ಕೂ ಯುವಕರ ನೃತ್ಯ, ಹಾಡುಗಳಿಂದ ಮೆರವಣಿಗೆ ಮೂಲಕ ಪಾದಯಾತ್ರೆ ಮುಂದೆ ಸಾಗಿತು.</p>.<p>ಶುಕ್ರವಾರ ಬೆಳಿಗ್ಗೆ ಪಟ್ಟಣದಿಂದ ಹಳ್ಳಿ ಹೊಸೂರು ಕಡೆಗೆ ಪಾದಯಾತ್ರೆ ಸಾಗಿತು.</p>.<p>ಸಮಾಜದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಶೋಕ ಗುತ್ತೇದಾರ ಚಾಗಭಾವಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ದೇವತಗಲ್, ಉಪಾಧ್ಯಕ್ಷ ಕೆ.ಶ್ರೀನಿವಾಸ ಕಡದಿನ್ನಿ ಕ್ಯಾಂಪ್, ಧನಂಜಯಗೌಡ ಹೀರಾ, ಜಂಬಣ್ಣ ಗಣದಿನ್ನಿ, ಶಿವಪುತ್ರಗೌಡ, ಲಕ್ಷ್ಮಣ ಮುಚ್ಚಳಗುಡ್ಡ ಕ್ಯಾಂಪ್ ಸೇರಿದಂತೆ ವಿವಿಧ ಹಿಂದುಳಿದ ಸಮಾಜಗಳ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>