<p>ದೇವದುರ್ಗ: ಜಾಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕ್ವಾರಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ದೇವದುರ್ಗ ಸಂಚಾರ ಪೊಲೀಸ್ ಠಾಣೆ ಕಾನ್ಸ್ಟೆಬಲ್ಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ದೇವದುರ್ಗ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಪಟ್ಟಣದ ಶಾಂತಿನಗರದಲ್ಲಿ ಅವರು ವಾಸಿಸುತ್ತಿದ್ದರು. ಶಾಂತಿನಗರವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದೂರುಗಳನ್ನು ಮುಂದಿನ ಏಳು ದಿನ ತಾತ್ಕಾಲಿಕವಾಗಿ ತಾಲ್ಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಲಿಂಗಸೂಗೂರು ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ತಿಳಿಸಿದರು.</p>.<p>ಕಾನ್ಸ್ಟೆಬಲ್ ಅವರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿರುವನ್ನು ಪತ್ತೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಇದಕ್ಕಾಗಿ ಕೆಲವು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು<br />ತಿಳಿಸಿದರು.</p>.<p>ಜನರಲ್ಲಿ ಅತಂಕ: ಶಾಂತಿನಗರದಲ್ಲಿ ವಾಸಿಸುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ಗೆ ಕೋವಿಡ್ ದೃಢಪಟ್ಟಿದ್ದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ.</p>.<p>ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜನರು ಅನಗತ್ಯವಾಗಿ ಹೊರಗಡೆ ಬರಬಾರದು. ಮಾಸ್ಕ್ ಧರಿಸುವ ಮೂಲಕ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು. ಸಬ್ ಇನ್ಸ್ಪೆಕ್ಟರ್ ರಂಗಯ್ಯ, ಮುಖ್ಯಾಧಿಕಾರಿ ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವದುರ್ಗ: ಜಾಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕ್ವಾರಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ದೇವದುರ್ಗ ಸಂಚಾರ ಪೊಲೀಸ್ ಠಾಣೆ ಕಾನ್ಸ್ಟೆಬಲ್ಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ದೇವದುರ್ಗ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಪಟ್ಟಣದ ಶಾಂತಿನಗರದಲ್ಲಿ ಅವರು ವಾಸಿಸುತ್ತಿದ್ದರು. ಶಾಂತಿನಗರವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದೂರುಗಳನ್ನು ಮುಂದಿನ ಏಳು ದಿನ ತಾತ್ಕಾಲಿಕವಾಗಿ ತಾಲ್ಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಲಿಂಗಸೂಗೂರು ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ತಿಳಿಸಿದರು.</p>.<p>ಕಾನ್ಸ್ಟೆಬಲ್ ಅವರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿರುವನ್ನು ಪತ್ತೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಇದಕ್ಕಾಗಿ ಕೆಲವು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು<br />ತಿಳಿಸಿದರು.</p>.<p>ಜನರಲ್ಲಿ ಅತಂಕ: ಶಾಂತಿನಗರದಲ್ಲಿ ವಾಸಿಸುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ಗೆ ಕೋವಿಡ್ ದೃಢಪಟ್ಟಿದ್ದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ.</p>.<p>ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜನರು ಅನಗತ್ಯವಾಗಿ ಹೊರಗಡೆ ಬರಬಾರದು. ಮಾಸ್ಕ್ ಧರಿಸುವ ಮೂಲಕ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು. ಸಬ್ ಇನ್ಸ್ಪೆಕ್ಟರ್ ರಂಗಯ್ಯ, ಮುಖ್ಯಾಧಿಕಾರಿ ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>