ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯ ಎಂಬ ತತ್ವಾಧಾರಿತ ಅಂಶಗಳು ಭಾರತದ ಸಾತ್ವಿಕ ಜೀವನ ಕ್ರಮಕ್ಕೆ ಸಾಕ್ಷಿಯಾಗಿ ನಿಲ್ಲುತ್ತವೆ. ಅಲ್ಲದೆ ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಭ್ರಾತೃತ್ವ, ಶಾಂತಿ ಹಾಗೂ ಅಂತರಾಷ್ಟ್ರೀಯ ಸಹಕಾರ ಎಂಬ ಆದರ್ಶಗಳು ಭಾರತೀಯ ಸಂವಿಧಾನದ ಉತ್ಕೃಷ್ಟತೆಯನ್ನು ಉತ್ತುಂಗಕ್ಕೆ ಏರಿಸಿವೆ ಎಂದರು.