ಇಲ್ಲಿನ 16 ವಾರ್ಡ್ಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಮೀಪದ ಲಕ್ಷ್ಮೀ ನಾರಾಯಣ ಕ್ಯಾಂಪ್ ಹತ್ತಿರ ನಿರ್ಮಿಸಿದ ಕೆರೆಯಲ್ಲಿ ನೀರು ಸಂಪೂರ್ಣ ಖಾಲಿಯಾಗಿದ್ದು, ಪಕ್ಕದಲ್ಲಿನ ಹಳೆ ಕೆರೆಯಿಂದ ನೀರು ಪೂರೈಸಲಾಗುತ್ತಿದೆ ಎನ್ನಲಾಗಿದೆ. ಬುಧವಾರ ಕೆಲವು ವಾರ್ಡ್ಗಳಿಗೆ ಪೂರೈಸಿದ ನೀರು ಸಂಪೂರ್ಣ ಕೆಸರು ಮಯವಾಗಿದ್ದು, ಅದರಲ್ಲಿ ಕಸ, ಕಡ್ಡಿ ಸೇರಿದಂತೆ ಗಲೀಜು ಬಂದಿದೆ. ಹಸಿರು ಬಣ್ಣಕ್ಕೆ ತಿರುಗಿದ ನೀರು ದುರ್ವಾಸನೆ ಬೀರುತ್ತಿದ್ದು, ಬಳಕೆಗೂ ಯೋಗ್ಯವಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.