<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ಕಾರ್ಮಿಕರ ಕಾಲೊನಿಗಳಿಗೆ ಮಣ್ಣು ಮಿಶ್ರಿತ ಕಲುಷಿತ ನೀರು ಪೂರೈಕೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.</p>.<p>ಕಂಪನಿ ವತಿಯಿಂದ ಟಣಮಕಲ್ಲು ಗ್ರಾಮದಿಂದ ಹಟ್ಟಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ನಳದಲ್ಲಿ ಬರುವ ನೀರು ಗಬ್ಬು ವಾಸನೆಯಿಂದ ಕೂಡಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲೊನಿ ನಿವಾಸಿಗಳು ಇದ್ದಾರೆ ಎಂದು ಕಾರ್ಮಿಕರು ಆರೋಪ ಮಾಡಿದ್ದಾರೆ.</p>.<p>ಮಣ್ಣು ಮಿಶ್ರಿತ ನೀರು ಸೇವನೆಯಿಂದ ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.</p>.<p>ಕುಡಿಯಲು ಯೋಗ್ಯವಲ್ಲದ ಮಣ್ಣು ಮಿಶ್ರಿತ ಬಳಕೆಗೆ ಬಾರದ ನೀರನ್ನು ಗಣಿ ಕಾರ್ಮಿಕರಿಗೆ ಕುಡಿಯಲು ಪೂರೈಕೆ ಮಾಡಲಾಗುತ್ತಿದ್ದು, ರೋಗಗಳು ಹರಡಿದರೆ ಗಣಿ ಕಂಪನಿಯ ಅಧಿಕಾರಿಗಳೇ ಹೊಣೆಗಾರರು ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.</p>.<p>ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರೂ ನಿರ್ಲಕ್ಷ್ಯ ವಹಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.</p>.<div><blockquote>ಮಣ್ಣು ಮಿಶ್ರಿತ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರಿಗೆ ಶುದ್ಧ ನೀರು ಪೂರೈಸಿ ಸಮಸ್ಯೆ ಬಗೆಹರಿಸಲಾಗುವುದು </blockquote><span class="attribution">ಪ್ರಕಾಶ ಕಾರ್ಯನಿರ್ವಾಹಕ ನಿರ್ದೇಶಕ ಹಟ್ಟಿ ಚಿನ್ನದ ಗಣಿ ಕಂಪನಿ</span></div>.<div><blockquote>ಮಣ್ಣು ಮಿಶ್ರಿತ ನೀರು ಪೂರೈಕೆಯಿಂದ ಬಡಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಗಣಿ ಕಂಪನಿಯ ಅಧಿಕಾರಿಗಳು ಗಮನಹರಿಸಿ ಕಾರ್ಮಿಕರ ಸಮಸ್ಯೆ ಬಗೆಹರಿಸಲಿ</blockquote><span class="attribution"> ಲಾಲು ಪೀರ್ ಮಾನವ ಬಂಧುತ್ವ ವೇದಿಕೆ ಹಟ್ಟಿ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ಕಾರ್ಮಿಕರ ಕಾಲೊನಿಗಳಿಗೆ ಮಣ್ಣು ಮಿಶ್ರಿತ ಕಲುಷಿತ ನೀರು ಪೂರೈಕೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.</p>.<p>ಕಂಪನಿ ವತಿಯಿಂದ ಟಣಮಕಲ್ಲು ಗ್ರಾಮದಿಂದ ಹಟ್ಟಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ನಳದಲ್ಲಿ ಬರುವ ನೀರು ಗಬ್ಬು ವಾಸನೆಯಿಂದ ಕೂಡಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲೊನಿ ನಿವಾಸಿಗಳು ಇದ್ದಾರೆ ಎಂದು ಕಾರ್ಮಿಕರು ಆರೋಪ ಮಾಡಿದ್ದಾರೆ.</p>.<p>ಮಣ್ಣು ಮಿಶ್ರಿತ ನೀರು ಸೇವನೆಯಿಂದ ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.</p>.<p>ಕುಡಿಯಲು ಯೋಗ್ಯವಲ್ಲದ ಮಣ್ಣು ಮಿಶ್ರಿತ ಬಳಕೆಗೆ ಬಾರದ ನೀರನ್ನು ಗಣಿ ಕಾರ್ಮಿಕರಿಗೆ ಕುಡಿಯಲು ಪೂರೈಕೆ ಮಾಡಲಾಗುತ್ತಿದ್ದು, ರೋಗಗಳು ಹರಡಿದರೆ ಗಣಿ ಕಂಪನಿಯ ಅಧಿಕಾರಿಗಳೇ ಹೊಣೆಗಾರರು ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.</p>.<p>ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರೂ ನಿರ್ಲಕ್ಷ್ಯ ವಹಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.</p>.<div><blockquote>ಮಣ್ಣು ಮಿಶ್ರಿತ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರಿಗೆ ಶುದ್ಧ ನೀರು ಪೂರೈಸಿ ಸಮಸ್ಯೆ ಬಗೆಹರಿಸಲಾಗುವುದು </blockquote><span class="attribution">ಪ್ರಕಾಶ ಕಾರ್ಯನಿರ್ವಾಹಕ ನಿರ್ದೇಶಕ ಹಟ್ಟಿ ಚಿನ್ನದ ಗಣಿ ಕಂಪನಿ</span></div>.<div><blockquote>ಮಣ್ಣು ಮಿಶ್ರಿತ ನೀರು ಪೂರೈಕೆಯಿಂದ ಬಡಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಗಣಿ ಕಂಪನಿಯ ಅಧಿಕಾರಿಗಳು ಗಮನಹರಿಸಿ ಕಾರ್ಮಿಕರ ಸಮಸ್ಯೆ ಬಗೆಹರಿಸಲಿ</blockquote><span class="attribution"> ಲಾಲು ಪೀರ್ ಮಾನವ ಬಂಧುತ್ವ ವೇದಿಕೆ ಹಟ್ಟಿ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>