<p><strong>ರಾಯಚೂರು</strong>: ‘ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿದೆ. ಅದು ಈಗ ಜಾತಿ ಸ್ವರೂಪ ಪಡೆದುಕೊಂಡಿದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.</p>.<p>ಒಕ್ಕಲಿಗರು ಡಿಕೆಶಿವಕುಮಾರ ಪರ, ಹಿಂದುಳಿದವರು ಸಿದ್ದರಾಮಯ್ಯ ಪರ ಎಂದು ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಆಗಲು ಸ್ಪರ್ಧೆ ನಡೆದಿರುವುದು ಕಾಂಗ್ರೆಸ್ ಸಂಸ್ಕೃತಿಯೇ ಎಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.</p>.<p>ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟ ಮಾಡಿರುವುದು ಜಾತಿಯಿಂದ ಅಲ್ಲ. ಚುನಾವಣೆ ವೇಳೆ ಜಾತಿ ವಿಷ ಬೀಜ ಬಿತ್ತುತ್ತಾರೆ. ಮುಸಲ್ಮಾನರಂತೂ ಅವರ ಜೊತೆಗೆ ಇದ್ದಾರೆ. ಮುಖ್ಯಮಂತ್ರಿ ಸ್ಥಾನವೂ ಜಾತಿ ರೂಪವಾಗಿ ಬೆಳೆಯುತ್ತಿರುವುದು ನಾಚಿಕೆಗೇಡು ಸಂಗತಿಯಾಗಿದೆ ಎಂದು ಟೀಕಿಸಿದರು.</p>.<p>ಬಿಜೆಪಿಯಲ್ಲೂ ಗುಂಪುಗಾರಿಗೆ ಇದೆ. ಕುಟುಂಬ ರಾಜಕಾರಣ, ಹೊಂದಾಣಿಕೆ ರಾಜಕಾರಣ ಎಲ್ಲ ರಾಜಕೀಯ ಪಕ್ಷಗಳಲ್ಲೂ ಇದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.</p>.<p>ಮಠ-ಮಾನ್ಯಗಳಿಗೆ ಕಾಂಗ್ರೆಸ್ ಸರ್ಕಾರವೂ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸದಾನಂದ ಗೌಡ ಮುಖ್ಯಮಂತ್ರಿಯಾದಾಗ ₹ 109 ಕೋಟಿ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ₹ 129 ಕೋಟಿ ಮಠಗಳಿಗೆ ಕೊಟ್ಟರು. ತಿಂಥಿಣಿ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿಸಿದರು.</p>.<p>ಕಾಂಗ್ರೆಸ್ಗೆ ಕುರುಬರ ಮತ ಬೇಕು. ಕುರುಬ ಸಮುದಾಯದ ಅಭಿವೃದ್ಧಿ ಬೇಡ. ಮಠಗಳ ಅಭಿವೃದ್ಧಿಯೂ ಬೇಡ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿದೆ. ಅದು ಈಗ ಜಾತಿ ಸ್ವರೂಪ ಪಡೆದುಕೊಂಡಿದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.</p>.<p>ಒಕ್ಕಲಿಗರು ಡಿಕೆಶಿವಕುಮಾರ ಪರ, ಹಿಂದುಳಿದವರು ಸಿದ್ದರಾಮಯ್ಯ ಪರ ಎಂದು ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಆಗಲು ಸ್ಪರ್ಧೆ ನಡೆದಿರುವುದು ಕಾಂಗ್ರೆಸ್ ಸಂಸ್ಕೃತಿಯೇ ಎಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.</p>.<p>ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟ ಮಾಡಿರುವುದು ಜಾತಿಯಿಂದ ಅಲ್ಲ. ಚುನಾವಣೆ ವೇಳೆ ಜಾತಿ ವಿಷ ಬೀಜ ಬಿತ್ತುತ್ತಾರೆ. ಮುಸಲ್ಮಾನರಂತೂ ಅವರ ಜೊತೆಗೆ ಇದ್ದಾರೆ. ಮುಖ್ಯಮಂತ್ರಿ ಸ್ಥಾನವೂ ಜಾತಿ ರೂಪವಾಗಿ ಬೆಳೆಯುತ್ತಿರುವುದು ನಾಚಿಕೆಗೇಡು ಸಂಗತಿಯಾಗಿದೆ ಎಂದು ಟೀಕಿಸಿದರು.</p>.<p>ಬಿಜೆಪಿಯಲ್ಲೂ ಗುಂಪುಗಾರಿಗೆ ಇದೆ. ಕುಟುಂಬ ರಾಜಕಾರಣ, ಹೊಂದಾಣಿಕೆ ರಾಜಕಾರಣ ಎಲ್ಲ ರಾಜಕೀಯ ಪಕ್ಷಗಳಲ್ಲೂ ಇದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.</p>.<p>ಮಠ-ಮಾನ್ಯಗಳಿಗೆ ಕಾಂಗ್ರೆಸ್ ಸರ್ಕಾರವೂ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸದಾನಂದ ಗೌಡ ಮುಖ್ಯಮಂತ್ರಿಯಾದಾಗ ₹ 109 ಕೋಟಿ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ₹ 129 ಕೋಟಿ ಮಠಗಳಿಗೆ ಕೊಟ್ಟರು. ತಿಂಥಿಣಿ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿಸಿದರು.</p>.<p>ಕಾಂಗ್ರೆಸ್ಗೆ ಕುರುಬರ ಮತ ಬೇಕು. ಕುರುಬ ಸಮುದಾಯದ ಅಭಿವೃದ್ಧಿ ಬೇಡ. ಮಠಗಳ ಅಭಿವೃದ್ಧಿಯೂ ಬೇಡ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>