ಪ್ರಾಚಾರ್ಯ ಡಾ.ಸಿ.ಬಿ.ಚಿಲ್ಕರಾಗಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಕೆ.ಖಾದರ್ಬಾಷ, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಸೈಯ್ಯದ್ ಮುಜೀಬ್, ಉಪನ್ಯಾಸಕರಾದ ಬಸವರಾಜ ಪಿ.ನಾಯಕ, ರಾಮಣ್ಣ ಹಿರೇಬೇರಿಗಿ, ಎರಿಯಪ್ಪ ಬೆಳಗುರ್ಕಿ, ಮಲ್ಲಯ್ಯ ಹಿರೇಮಠ, ಡಾ.ಬಸವರಾಜ ಬಳಿಗಾರ, ಡಾ.ಹುಲಿಗೆಪ್ಪ ಧುಮತಿ, ಡಾ.ಪರಶುರಾಮ ಕಟ್ಟಿಮನಿ ಇದ್ದರು. ಶಂಕರ ಗುರಿಕಾರ ಹಾಗೂ ಸಂಗಡಿಗರು ಬಂಡಾಯದ ಗೀತೆ ಹಾಡಿದರು. ಜ್ಯೋತಿ ಸ್ವಾಗತಿಸಿದರು. ನಾಗರತ್ನ ನಿರೂಪಿಸಿದರು.