<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಪಟ್ಟಣ ಸೇರಿದಂತೆ ಹೋಬಳಿ ಕೇಂದ್ರದಲ್ಲಿ ಮಳೆ ಬಿಡುವು ನೀಡಿದೆ. ಹತ್ತಿ, ಸಜ್ಜೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳ ಕಟಾವು ಕಾರ್ಯ ಭರದಿಂದ ಸಾಗಿದ್ದು, ರೈತರು ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಬೇಡಿಕೆ ಹೆಚ್ಚಿದೆ.</p>.<p>ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ 1450 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ, 650 ಹೆಕ್ಟೇರ್ನಲ್ಲಿ ಸೂರ್ಯಕಾಂತಿ, 600 ಹೆಕ್ಟೇರ್ನಲ್ಲಿ ಮೆಣಸಿನಕಾಯಿ, ಸಜ್ಜೆ 2,934 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ.</p>.<p>ರೈತರು, ಹತ್ತಿ ಬಿಡಿಸುವ ಕಾರ್ಯದಲ್ಲಿ ತೊಡಗಿದ್ದು, ವಾರದ ಹಿಂದೆ ಕ್ವಿಂಟಲ್ಗೆ ₹ 17 ಸಾವಿರ ಇತ್ತು. ಈಗ ಕ್ವಿಂಟಲ್ಗೆ ₹ 16 ಸಾವಿರಕ್ಕೆ ಇಳಿದಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.</p>.<p>ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದರು. ನಂತರದಲ್ಲಿ ಸುರಿ ಮಳೆಯಿಂದಾಗಿ ಕಾಯಿ ಹಾಳಾಗಿ, ರೈತರ ನಿರೀಕ್ಷೆ ಹುಸಿಯಾಯಿತು ಎಂದು ರೈತ ಕ್ಯಾತನಗೌಡ ಮಾಚನೂರು ಹೇಳಿದರು.</p>.<p>ಕಟವು ಮಾಡಿದ ಹತ್ತಿಯನ್ನು ಸಂಗ್ರಹಿಸಿ ಇಡಲಾಗಿದೆ. ದರ ಕಡಿಮೆಯಿಂದ ಮತ್ತೆ ಸಂಕಷ್ಟ ಎದುರಿಸುವಂತಾಗಿದೆ. ಮಳೆ ಒಂದಡೆಯಾದರೆ ಬೆಲೆ ಕುಸಿತದಿಂದ ರೈತನ ಮೆಲೆ ಮತ್ತೆ ಬರೆ ಎಳೆದಂತಾಗಿದೆ ಎನ್ನುತ್ತಾರೆ ರೈತರು.</p>.<p>ಕೇಂದ್ರ ಆರಂಭಕ್ಕೆ ಒತ್ತಾಯ: ಈಗಾಗಲೇ ಹತ್ತಿ, ಸೂರ್ಯಕಾಂತಿ, ಸಜ್ಜೆ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಆದರೆ ಗುತ್ತಿಗೆ ಪಡೆದ ಗುತ್ತಿಗೆದಾರರು, ಈವರೆಗೂ ಕೇಂದ್ರಗಳನ್ನು ಆರಂಭಿಸಿಲ್ಲ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸಂಬಂದಪಟ್ಟ ಅಧಿಕಾರಿಗಳು ರೈತರ ಸಮಸ್ಯೆಗೆ ದಾವಿಸಲಿ ಎನ್ನುತ್ತಾರೆ ರೈತರು.</p>.<div><blockquote>ಮಳೆಯಿಂದ ಹತ್ತಿ ಬೆಳೆಗೆ ತೇವಾಂಶ ಹೆಚ್ಚಾಗಿದೆ. ನೀರು ನಿಲ್ಲದಂತೆ ನೊಡಿಕೊಳ್ಳಬೇಕು. ಔಷಧ ಸಿಂಪಡಣೆ ಕುರಿತು ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಮಾಹಿತಿ ಪಡೆದುಕೊಳ್ಳಲಿ </blockquote><span class="attribution">ಮಲ್ಲಿಕಾರ್ಜುನ ಸಹಾಯಕ ನಿರ್ದೇಶಕ ಕೃಷಿ ಇಲಾಖೆ ಲಿಂಗಸುಗೂರು</span></div>.<div><blockquote>ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಲು ಅಧಿಕಾರಿಗಳು ಗಮನಹರಿಸಬೇಕು</blockquote><span class="attribution"> ಬಸವರಾಜ ಗೌಡೂರು ರಾಜ್ಯ ರೈತ ಹಸಿರು ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಪಟ್ಟಣ ಸೇರಿದಂತೆ ಹೋಬಳಿ ಕೇಂದ್ರದಲ್ಲಿ ಮಳೆ ಬಿಡುವು ನೀಡಿದೆ. ಹತ್ತಿ, ಸಜ್ಜೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳ ಕಟಾವು ಕಾರ್ಯ ಭರದಿಂದ ಸಾಗಿದ್ದು, ರೈತರು ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಬೇಡಿಕೆ ಹೆಚ್ಚಿದೆ.</p>.<p>ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ 1450 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ, 650 ಹೆಕ್ಟೇರ್ನಲ್ಲಿ ಸೂರ್ಯಕಾಂತಿ, 600 ಹೆಕ್ಟೇರ್ನಲ್ಲಿ ಮೆಣಸಿನಕಾಯಿ, ಸಜ್ಜೆ 2,934 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ.</p>.<p>ರೈತರು, ಹತ್ತಿ ಬಿಡಿಸುವ ಕಾರ್ಯದಲ್ಲಿ ತೊಡಗಿದ್ದು, ವಾರದ ಹಿಂದೆ ಕ್ವಿಂಟಲ್ಗೆ ₹ 17 ಸಾವಿರ ಇತ್ತು. ಈಗ ಕ್ವಿಂಟಲ್ಗೆ ₹ 16 ಸಾವಿರಕ್ಕೆ ಇಳಿದಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.</p>.<p>ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದರು. ನಂತರದಲ್ಲಿ ಸುರಿ ಮಳೆಯಿಂದಾಗಿ ಕಾಯಿ ಹಾಳಾಗಿ, ರೈತರ ನಿರೀಕ್ಷೆ ಹುಸಿಯಾಯಿತು ಎಂದು ರೈತ ಕ್ಯಾತನಗೌಡ ಮಾಚನೂರು ಹೇಳಿದರು.</p>.<p>ಕಟವು ಮಾಡಿದ ಹತ್ತಿಯನ್ನು ಸಂಗ್ರಹಿಸಿ ಇಡಲಾಗಿದೆ. ದರ ಕಡಿಮೆಯಿಂದ ಮತ್ತೆ ಸಂಕಷ್ಟ ಎದುರಿಸುವಂತಾಗಿದೆ. ಮಳೆ ಒಂದಡೆಯಾದರೆ ಬೆಲೆ ಕುಸಿತದಿಂದ ರೈತನ ಮೆಲೆ ಮತ್ತೆ ಬರೆ ಎಳೆದಂತಾಗಿದೆ ಎನ್ನುತ್ತಾರೆ ರೈತರು.</p>.<p>ಕೇಂದ್ರ ಆರಂಭಕ್ಕೆ ಒತ್ತಾಯ: ಈಗಾಗಲೇ ಹತ್ತಿ, ಸೂರ್ಯಕಾಂತಿ, ಸಜ್ಜೆ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಆದರೆ ಗುತ್ತಿಗೆ ಪಡೆದ ಗುತ್ತಿಗೆದಾರರು, ಈವರೆಗೂ ಕೇಂದ್ರಗಳನ್ನು ಆರಂಭಿಸಿಲ್ಲ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸಂಬಂದಪಟ್ಟ ಅಧಿಕಾರಿಗಳು ರೈತರ ಸಮಸ್ಯೆಗೆ ದಾವಿಸಲಿ ಎನ್ನುತ್ತಾರೆ ರೈತರು.</p>.<div><blockquote>ಮಳೆಯಿಂದ ಹತ್ತಿ ಬೆಳೆಗೆ ತೇವಾಂಶ ಹೆಚ್ಚಾಗಿದೆ. ನೀರು ನಿಲ್ಲದಂತೆ ನೊಡಿಕೊಳ್ಳಬೇಕು. ಔಷಧ ಸಿಂಪಡಣೆ ಕುರಿತು ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಮಾಹಿತಿ ಪಡೆದುಕೊಳ್ಳಲಿ </blockquote><span class="attribution">ಮಲ್ಲಿಕಾರ್ಜುನ ಸಹಾಯಕ ನಿರ್ದೇಶಕ ಕೃಷಿ ಇಲಾಖೆ ಲಿಂಗಸುಗೂರು</span></div>.<div><blockquote>ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಲು ಅಧಿಕಾರಿಗಳು ಗಮನಹರಿಸಬೇಕು</blockquote><span class="attribution"> ಬಸವರಾಜ ಗೌಡೂರು ರಾಜ್ಯ ರೈತ ಹಸಿರು ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>