<p><strong>ರಾಯಚೂರು:</strong> ರಾಯಚೂರು ಹಾಗೂ ಕೊಪ್ಪಳ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸುವುದು ಮಂಗಳವಾರ ಕೊನೆಗೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಐವರು ಅಭ್ಯರ್ಥಿಗಳು ಒಟ್ಟು 12 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.</p>.<p>ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶರಣಗೌಡ ಪಾಟೀಲ ಬಯ್ಯಾಪೂರ 4 ನಾಮಪತ್ರಗಳು, ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ಬನಹಟ್ಟಿ 4 ನಾಮಪತ್ರಗಳು, ಜನಹಿತ ಪಾರ್ಟಿ ಅಭ್ಯರ್ಥಿ ತಿರುಪತಿ ನರಸಪ್ಪ ಅವರಿಂದ 2 ನಾಮಪತ್ರಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೊಡ್ಡ ಬಸನಗೌಡ ಪಾಟೀಲ ಹಾಗೂ ನರೇಂದ್ರ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.</p>.<p>ಕೊನೆಯ ದಿನ ಕಾಂಗ್ರೆಸ್ ಹಾಗೂ ಬಿಜೆಪಿ, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಮಿತ್ತ ಪ್ರತ್ಯೇಕ ಕಡೆಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಆಯೋಜಿಸಿದ್ದವು. ನಾಮಪತ್ರ ಸಲ್ಲಿಸುವುದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಾಕಷ್ಟು ಸಂಖ್ಯೆಯಲ್ಲಿ ಮುಖಂಡರು ಬಂದಿದ್ದರು. ಆದರೆ, ಕಚೇರಿಯೊಳಗೆ ಅಭ್ಯರ್ಥಿಯೊಂದಿಗೆ ಮೂವರು ಮಾತ್ರ ಇರುವುದಕ್ಕೆ ಅವಕಾಶ ನೀಡಲಾಗಿತ್ತು.</p>.<p>ಬಿಜೆಪಿ ಅಭ್ಯರ್ಥಿಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಂಸದರಾದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಬಸವರಾಜ್ ದಡೇಸೂಗೂರು, ಪರಣ್ಣ ಮುನವಳ್ಳಿ, ಶಿವನಗೌಡ ನಾಯಕ ಮತ್ತಿತರರು ಬಂದಿದ್ದರು.</p>.<p>ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ ಸೇರಿದಂತೆ ಪಕ್ಷದ ಮುಖಂಡರಿದ್ದರು. ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಅವರು ನಾಮಪತ್ರಗಳನ್ನು ಸ್ವೀಕರಿಸಿದರು.</p>.<p>ಹೆಚ್ಚವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಚುನಾವಣೆ ಶಾಖೆಯ ಶಿರಸ್ತೇದಾರ ಸೂಗೂರೇಶ ದೇಸಾಯಿ ಇದ್ದರು.</p>.<p><strong>ಇಬ್ಬರೂ ಕೋಟ್ಯಾಧೀಶ ಅಭ್ಯರ್ಥಿಗಳು</strong></p>.<p>ರಾಯಚೂರು: ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಇಬ್ಬರೂ ಕೋಟ್ಯಾಧೀಶರು.</p>.<p>ಶರಣಗೌಡ ಅವರದ್ದು ಚರಾಸ್ತಿ ಒಟ್ಟು ₹17,94,06,249 ಇದೆ. ನಿವೇಶಗಳು, ಜಮೀನು, ಮನೆ ಸೇರಿದಂತೆ ಒಟ್ಟು ₹18,93,05,000 ಮೌಲ್ಯದ ಇದೆ. ₹1.87 ಕೋಟಿ ಸಾಲವಿದೆ ಎಂದು ಘೋಷಿಸಿದ್ದಾರೆ.</p>.<p>ವಿಶ್ವನಾಥ ಬನಹಟ್ಟಿ ಅವರದ್ದು ಒಟ್ಟು ₹1,87,61,554 ಚರಾಸ್ತಿ. ನಿವೇಶಗಳು, ಜಮೀನು, ಮನೆ ಸೇರಿದಂತೆ ಒಟ್ಟು ₹1,56,75,000 ಮೌಲ್ಯದ ಸ್ಥಿರಾಸ್ತಿ ಇದೆ. ₹67.75 ಲಕ್ಷ ಸಾಲವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಯಚೂರು ಹಾಗೂ ಕೊಪ್ಪಳ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸುವುದು ಮಂಗಳವಾರ ಕೊನೆಗೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಐವರು ಅಭ್ಯರ್ಥಿಗಳು ಒಟ್ಟು 12 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.</p>.<p>ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶರಣಗೌಡ ಪಾಟೀಲ ಬಯ್ಯಾಪೂರ 4 ನಾಮಪತ್ರಗಳು, ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ಬನಹಟ್ಟಿ 4 ನಾಮಪತ್ರಗಳು, ಜನಹಿತ ಪಾರ್ಟಿ ಅಭ್ಯರ್ಥಿ ತಿರುಪತಿ ನರಸಪ್ಪ ಅವರಿಂದ 2 ನಾಮಪತ್ರಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೊಡ್ಡ ಬಸನಗೌಡ ಪಾಟೀಲ ಹಾಗೂ ನರೇಂದ್ರ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.</p>.<p>ಕೊನೆಯ ದಿನ ಕಾಂಗ್ರೆಸ್ ಹಾಗೂ ಬಿಜೆಪಿ, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಮಿತ್ತ ಪ್ರತ್ಯೇಕ ಕಡೆಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಆಯೋಜಿಸಿದ್ದವು. ನಾಮಪತ್ರ ಸಲ್ಲಿಸುವುದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಾಕಷ್ಟು ಸಂಖ್ಯೆಯಲ್ಲಿ ಮುಖಂಡರು ಬಂದಿದ್ದರು. ಆದರೆ, ಕಚೇರಿಯೊಳಗೆ ಅಭ್ಯರ್ಥಿಯೊಂದಿಗೆ ಮೂವರು ಮಾತ್ರ ಇರುವುದಕ್ಕೆ ಅವಕಾಶ ನೀಡಲಾಗಿತ್ತು.</p>.<p>ಬಿಜೆಪಿ ಅಭ್ಯರ್ಥಿಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಂಸದರಾದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಬಸವರಾಜ್ ದಡೇಸೂಗೂರು, ಪರಣ್ಣ ಮುನವಳ್ಳಿ, ಶಿವನಗೌಡ ನಾಯಕ ಮತ್ತಿತರರು ಬಂದಿದ್ದರು.</p>.<p>ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ ಸೇರಿದಂತೆ ಪಕ್ಷದ ಮುಖಂಡರಿದ್ದರು. ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಅವರು ನಾಮಪತ್ರಗಳನ್ನು ಸ್ವೀಕರಿಸಿದರು.</p>.<p>ಹೆಚ್ಚವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಚುನಾವಣೆ ಶಾಖೆಯ ಶಿರಸ್ತೇದಾರ ಸೂಗೂರೇಶ ದೇಸಾಯಿ ಇದ್ದರು.</p>.<p><strong>ಇಬ್ಬರೂ ಕೋಟ್ಯಾಧೀಶ ಅಭ್ಯರ್ಥಿಗಳು</strong></p>.<p>ರಾಯಚೂರು: ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಇಬ್ಬರೂ ಕೋಟ್ಯಾಧೀಶರು.</p>.<p>ಶರಣಗೌಡ ಅವರದ್ದು ಚರಾಸ್ತಿ ಒಟ್ಟು ₹17,94,06,249 ಇದೆ. ನಿವೇಶಗಳು, ಜಮೀನು, ಮನೆ ಸೇರಿದಂತೆ ಒಟ್ಟು ₹18,93,05,000 ಮೌಲ್ಯದ ಇದೆ. ₹1.87 ಕೋಟಿ ಸಾಲವಿದೆ ಎಂದು ಘೋಷಿಸಿದ್ದಾರೆ.</p>.<p>ವಿಶ್ವನಾಥ ಬನಹಟ್ಟಿ ಅವರದ್ದು ಒಟ್ಟು ₹1,87,61,554 ಚರಾಸ್ತಿ. ನಿವೇಶಗಳು, ಜಮೀನು, ಮನೆ ಸೇರಿದಂತೆ ಒಟ್ಟು ₹1,56,75,000 ಮೌಲ್ಯದ ಸ್ಥಿರಾಸ್ತಿ ಇದೆ. ₹67.75 ಲಕ್ಷ ಸಾಲವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>