<p><strong>ರಾಯಚೂರು: </strong>ಜಿಲ್ಲೆಗೆ 15 ಕೆಎಲ್ ಆಮ್ಲಜನಕ ಮತ್ತು 750 ರೆಮ್ಡಿಸಿವರ್ ಚುಚ್ಚುಮದ್ದು ಒದಗಿಸುವಂತೆ ಮುಖ್ಯಮಂತ್ರಿ ಅವರನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.</p>.<p>ಸೋಮವಾರ ಮುಖ್ಯಮಂತ್ರಿಯೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ರಾಯಚೂರು ನಗರದ ಸುರಾನಾ ಇಂಡಸ್ಟ್ರೀಸ್ನಲ್ಲಿರುವ 50 ಕೆಎಲ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪರಿಶೀಲಿಸುವಂತೆ ತಜ್ಞರ ತಂಡಕ್ಕೆ ತಿಳಿಸಲಾಗಿದೆ ಎಂದರು.</p>.<p>ಮಧುಮೇಹ, ಕ್ಯಾನ್ಸರ್, ಎಚ್ಐವಿ ಇದ್ದವರಿಗೆ ಕೋವಿಡ್ ಇಂಜಿಕ್ಷನ್ ನೀಡಿದರೆ ಬ್ಲಾಕ್ ಫಂಗಸ್ ಕಾಯಿಲೆ ಬರುತ್ತಿದೆ. ಇಂಥವರಿಗೆ ಚಿಕಿತ್ಸೆ ನೀಡಲು ₹ 3.5 ಲಕ್ಷದವರೆಗೂ ವೆಚ್ಚವಾಗುತ್ತದೆ. ಜಿಲ್ಲೆಯಲ್ಲಿ ನಾಲ್ಕು ಜನರಲ್ಲಿ ಇದು ಕಾಣಿಸಿಕೊಂಡಿದೆ. ಉಚಿತ ಚಿಕಿತ್ಸೆ ನೀಡಲು ನೆರವು ನೀಡಲು ಮುಖ್ಯಮಂತ್ರಿಗೆ ಕೋರಿದ್ದು, ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲೆಗೆ 15 ಕೆಎಲ್ ಆಮ್ಲಜನಕ ಮತ್ತು 750 ರೆಮ್ಡಿಸಿವರ್ ಚುಚ್ಚುಮದ್ದು ಒದಗಿಸುವಂತೆ ಮುಖ್ಯಮಂತ್ರಿ ಅವರನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.</p>.<p>ಸೋಮವಾರ ಮುಖ್ಯಮಂತ್ರಿಯೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ರಾಯಚೂರು ನಗರದ ಸುರಾನಾ ಇಂಡಸ್ಟ್ರೀಸ್ನಲ್ಲಿರುವ 50 ಕೆಎಲ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪರಿಶೀಲಿಸುವಂತೆ ತಜ್ಞರ ತಂಡಕ್ಕೆ ತಿಳಿಸಲಾಗಿದೆ ಎಂದರು.</p>.<p>ಮಧುಮೇಹ, ಕ್ಯಾನ್ಸರ್, ಎಚ್ಐವಿ ಇದ್ದವರಿಗೆ ಕೋವಿಡ್ ಇಂಜಿಕ್ಷನ್ ನೀಡಿದರೆ ಬ್ಲಾಕ್ ಫಂಗಸ್ ಕಾಯಿಲೆ ಬರುತ್ತಿದೆ. ಇಂಥವರಿಗೆ ಚಿಕಿತ್ಸೆ ನೀಡಲು ₹ 3.5 ಲಕ್ಷದವರೆಗೂ ವೆಚ್ಚವಾಗುತ್ತದೆ. ಜಿಲ್ಲೆಯಲ್ಲಿ ನಾಲ್ಕು ಜನರಲ್ಲಿ ಇದು ಕಾಣಿಸಿಕೊಂಡಿದೆ. ಉಚಿತ ಚಿಕಿತ್ಸೆ ನೀಡಲು ನೆರವು ನೀಡಲು ಮುಖ್ಯಮಂತ್ರಿಗೆ ಕೋರಿದ್ದು, ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>