ಬಳಿಕ ಮಾತನಾಡಿದ ಅವರು, ‘ಕೊರೊನಾ ಮಹಾಮಾರಿ ದೇಶದಾದ್ಯಂತ ವ್ಯಾಪಿಸಿದ್ದು, ಅನೇಕ ರೋಗಿಗಳು ಬೆಡ್, ವೆಂಟಿಲೇಟರ್, ಆಮ್ಲಜನಕ, ರೆಮ್ಡಿಸಿವಿರ್ ಚುಚ್ಚುಮದ್ದುಗಳಿಗಾಗಿ ಪರದಾಡುತ್ತಿದ್ದಾರೆ. ಸರ್ಕಾರ ಹಲವಾರು ರೀತಿಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತಲೂ ಶೇ 50 ರಷ್ಟು ಕಡಿಮೆ ಪಡೆದು ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದಾಗಿರುವ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.