<p>ಪ್ರಜಾವಾಣಿ ವಾರ್ತೆ</p>.<p>ರಾಯಚೂರು: ಜಿಲ್ಲೆಯಲ್ಲಿ ವಾರಾಂತ್ಯ ಶನಿವಾರ ಎಲ್ಲೆಡೆಯಲ್ಲೂ ಲಾಕ್ಡೌನ್ ಜಾರಿ ಆಗಿತ್ತು.</p>.<p>ಅಗತ್ಯವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳು ಬಂದ್ ಆಗಿದ್ದವು. ಪ್ರತಿದಿನ ಜನರಿಂದ ಕೂಡಿರುತ್ತಿದ್ದ ತೀನ್ ಕಂದಿಲ್, ಸೂಪರ್ ಬಜಾರ್, ಚಂದ್ರಮೌಳೇಶ್ವರ ವೃತ್ತ, ಗಂಜ್ ರಸ್ತೆಗಳು ಖಾಲಿಖಾಲಿಯಾಗಿದ್ದವು. ರಸ್ತೆಯುದ್ದಕ್ಕೂ ಮಳಿಗೆಗಳು ಬಂದ್ ಆಗಿದ್ದರಿಂದ ಜನದಟ್ಟಣೆ ಇರಲಿಲ್ಲ.</p>.<p>ಆದರೆ, ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹಜವಾಗಿತ್ತು. ಸರ್ಕಾರಿ ಬಸ್ ಸಂಚಾರ ಇದ್ದುದರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಎಂದಿನಂತೆ ಬರುತ್ತಿರುವುದು ಕಂಡುಬಂತು. ಪೊಲೀಸರು ಬಡಾವಣೆಗಳಲ್ಲಿ ಸಂಚರಿಸಿದರು.</p>.<p>ಕೆಲವೆಡೆ ಒಂದೆಡೆ ಸೇರಿದ್ದ ಜನರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದರು.</p>.<p>ರಸ್ತೆಗಳಲ್ಲಿ ಅನಗತ್ಯ ಸಂಚರಿಸುವವರ ಮೇಲೆ ನಿಗಾ ವಹಿಸಿದ್ದ ಪೊಲೀಸರು, ಸಂಚರಿಸುವ ಉದ್ದೇಶವನ್ನು ವಿಚಾರಿಸುತ್ತಿದ್ದರು. ಜೊತೆಗೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದವರಿಗೆ ದಂಡ ಹಾಕಲಾಗುವುದು ಎಂದು ಎಚ್ಚರಿಸಿ ಕಳುಹಿಸುತ್ತಿದ್ದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಸ್ಟೇಷನ್ ವೃತ್ತ, ಗಂಜ್ ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರಿದ್ದರು. ಸಂಜೆಯ ವೇಳೆಗೆ ನಗರದ ಬಹುತೇಕ ಪ್ರದೇಶಗಳು ಜನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ರಾಯಚೂರು: ಜಿಲ್ಲೆಯಲ್ಲಿ ವಾರಾಂತ್ಯ ಶನಿವಾರ ಎಲ್ಲೆಡೆಯಲ್ಲೂ ಲಾಕ್ಡೌನ್ ಜಾರಿ ಆಗಿತ್ತು.</p>.<p>ಅಗತ್ಯವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳು ಬಂದ್ ಆಗಿದ್ದವು. ಪ್ರತಿದಿನ ಜನರಿಂದ ಕೂಡಿರುತ್ತಿದ್ದ ತೀನ್ ಕಂದಿಲ್, ಸೂಪರ್ ಬಜಾರ್, ಚಂದ್ರಮೌಳೇಶ್ವರ ವೃತ್ತ, ಗಂಜ್ ರಸ್ತೆಗಳು ಖಾಲಿಖಾಲಿಯಾಗಿದ್ದವು. ರಸ್ತೆಯುದ್ದಕ್ಕೂ ಮಳಿಗೆಗಳು ಬಂದ್ ಆಗಿದ್ದರಿಂದ ಜನದಟ್ಟಣೆ ಇರಲಿಲ್ಲ.</p>.<p>ಆದರೆ, ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹಜವಾಗಿತ್ತು. ಸರ್ಕಾರಿ ಬಸ್ ಸಂಚಾರ ಇದ್ದುದರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಎಂದಿನಂತೆ ಬರುತ್ತಿರುವುದು ಕಂಡುಬಂತು. ಪೊಲೀಸರು ಬಡಾವಣೆಗಳಲ್ಲಿ ಸಂಚರಿಸಿದರು.</p>.<p>ಕೆಲವೆಡೆ ಒಂದೆಡೆ ಸೇರಿದ್ದ ಜನರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದರು.</p>.<p>ರಸ್ತೆಗಳಲ್ಲಿ ಅನಗತ್ಯ ಸಂಚರಿಸುವವರ ಮೇಲೆ ನಿಗಾ ವಹಿಸಿದ್ದ ಪೊಲೀಸರು, ಸಂಚರಿಸುವ ಉದ್ದೇಶವನ್ನು ವಿಚಾರಿಸುತ್ತಿದ್ದರು. ಜೊತೆಗೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದವರಿಗೆ ದಂಡ ಹಾಕಲಾಗುವುದು ಎಂದು ಎಚ್ಚರಿಸಿ ಕಳುಹಿಸುತ್ತಿದ್ದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಸ್ಟೇಷನ್ ವೃತ್ತ, ಗಂಜ್ ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರಿದ್ದರು. ಸಂಜೆಯ ವೇಳೆಗೆ ನಗರದ ಬಹುತೇಕ ಪ್ರದೇಶಗಳು ಜನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>