ನಂತರ ಮಾತನಾಡಿದ ಅವರು, ರಾಯಚೂರು ನಗರ ಮತ್ತು ಗ್ರಾಮೀಣ ಸೇರಿ 1200 ಜನ ಕೋವಿಡ್ದಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಆದರೆ, ಜಿಲ್ಲಾಡಳಿತ 17 ಜನ ಮೃತಪಟ್ಟಿದ್ದಾರೆ ಎಂದು ಸರ್ಕಾರಕ್ಕೆ ವರದಿ ನೀಡಿದೆ. ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ಕೋವಿಡ್ದಿಂದ ಮೃತಪಟ್ಟ ಬಡ ಕುಟುಂಬದವರಿಗೆ ಪರಿಹಾರ ಸಿಗುವಂತಾಗಲಿ ಎಂದರು.