<p><strong>ರಾಯಚೂರು: </strong>ಎಲ್ಲೆಡೆಯಲ್ಲೂ ಕೋವಿಡ್–19 ಭೀತಿ ಆವರಿಸುವುದರಿಂದ ಸರ್ಕಾರಿ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ದು ರಾಯಚೂರು ವಿಭಾಗವು ಭಾಗಶಃ ನಷ್ಟ ಅನುಭವಿಸುವಂತಾಗಿದೆ.</p>.<p>ಮುಖ್ಯವಾಗಿ ಸ್ಲೀಪರ್ ಬಸ್ಗಳಿಗೆ ಆನ್ಲೈನ್, ಆಫ್ಲೈನ್ ಬುಕಿಂಗ್ ಆಗುತ್ತಿಲ್ಲ. ಶೇ 30 ಕ್ಕಿಂತ ಪ್ರಯಾಣಿಕರ ಸಂಖ್ಯೆ ಕಡಿಮೆಯಾದರೆ, ಬಸ್ ಸಂಚಾರ ರದ್ದುಗೊಳಿಸುವ ಅನಿವಾರ್ಯತೆ ನಿರ್ಮಾಣವಾಗುತ್ತಿದೆ. ಬೆಂಗಳೂರಿಗೆ ಶನಿವಾರ ಮತ್ತು ಭಾನುವಾರ ವಾರಾಂತ್ಯದ ದಿನಗಳಲ್ಲಿ ಮಾತ್ರ ಬುಕಿಂಗ್ ಆಗುತ್ತಿವೆ. ಇನ್ನುಳಿದ ದಿನಗಳಲ್ಲಿ ಜನರು ಬೆಂಗಳೂರಿನತ್ತ ಹೋಗುತ್ತಿಲ್ಲ.</p>.<p>‘ಬೆಂಗಳೂರು ಮಾರ್ಗದಲ್ಲಿ ಹೋಗುತ್ತಿದ್ದ ಬಸ್ಗಳಿಂದಾಗಿ ಕಳೆದ ಒಂದು ವಾರದಲ್ಲಿ ₹6 ಲಕ್ಷ ನಷ್ಟವಾಗಿದೆ. ಎಂಟು ಡಿಪೋಗಳನ್ನು ಒಳಗೊಂಡಿರುವ ರಾಯಚೂರು ವಿಭಾಗದಲ್ಲಿ ಪ್ರತಿದಿನ ₹50 ಲಕ್ಷ ಆದಾಯ ಸಂಗ್ರಹ ಆಗುತ್ತಿತ್ತು. ಈಗ ₹3 ರಿಂದ ₹4 ಲಕ್ಷ ಆದಾಯ ಸಂಗ್ರಹ ಕಡಿಮೆ ಆಗಿದೆ. ಕೆಂಪು ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಅಷ್ಟೊಂದು ಕಡಿಮೆ ಆಗಿಲ್ಲ’ ಎನ್ನುವುದು ಎನ್ಇಕೆಆರ್ಟಿಸಿ ಅಧಿಕಾರಿಗಳ ವಿವರಣೆ.</p>.<p><strong>ಮುನ್ನಚ್ಚರಿಕೆ</strong></p>.<p>ಸದಾ ಜನಜಂಗುಳಿ ಮಧ್ಯೆ ಕಾರ್ಯನಿರ್ವಹಿಸುವ ಎನ್ಇಕೆಆರ್ಟಿಸಿ ಚಾಲಕರು, ನಿರ್ವಾಹಕರು, ನಿಲ್ದಾಣದ ಅಧಿಕಾರಿಗಳು ಹಾಗೂ ಡಿಪೋ ಸಿಬ್ಬಂದಿಯ ಆರೋಗ್ಯ ಸುರಕ್ಷತೆಗಾಗಿ ‘ಕೋವಿಡ್–19’ ತಡೆಗಾಗಿ ಎನ್ಇಕೆಆರ್ಟಿಸಿ ರಾಯಚೂರು ವಿಭಾಗವು ಮುನ್ನಚ್ಚರಿಕೆ ಕ್ರಮ ಕೈಗೊಂಡಿದೆ.</p>.<p>ಬಸ್ ನಿಲ್ದಾಣಗಳಲ್ಲಿ, ಬಸ್ಗಳಲ್ಲಿ ಮತ್ತು ಕಚೇರಿಗಳಲ್ಲಿ ವ್ಯಾಪಕ ಶುಚಿತ್ವ ಅಭಿಯಾನ ಆರಂಭಿಸಿದೆ. ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸ್ವಚ್ಛತೆ ಕಾರ್ಯ ಭರದಿಂದ ನಡೆಯಿತು. ಶುಚಿತ್ವ ಕಾಪಾಡಿಕೊಂಡು ‘ವೈರಸ್’ ಮುಕ್ತರಾಗಿ ಕರ್ತವ್ಯ ನಿರ್ವಹಿಸುವ ಕುರಿತು ವಿಶೇಷ ಜಾಗೃತಿ ಸಭೆಗಳನ್ನು ನಡೆಸಲಾಗಿದೆ. ಕಳೆದ ವಾರ ರಾಯಚೂರು ವಿಭಾಗೀಯ ಕಚೇರಿಯಿಂದ ಚಾಲಕರು, ನಿರ್ವಾಹಕರು ಹಾಗೂ ಅಧಿಕಾರಿಗಳಿಗೆಲ್ಲ ಒಟ್ಟು ಒಂದು ಸಾವಿರ ‘ಮುಖಗವುಸು’ಗಳನ್ನು ಉಚಿತವಾಗಿ ವಿತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಎಲ್ಲೆಡೆಯಲ್ಲೂ ಕೋವಿಡ್–19 ಭೀತಿ ಆವರಿಸುವುದರಿಂದ ಸರ್ಕಾರಿ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ದು ರಾಯಚೂರು ವಿಭಾಗವು ಭಾಗಶಃ ನಷ್ಟ ಅನುಭವಿಸುವಂತಾಗಿದೆ.</p>.<p>ಮುಖ್ಯವಾಗಿ ಸ್ಲೀಪರ್ ಬಸ್ಗಳಿಗೆ ಆನ್ಲೈನ್, ಆಫ್ಲೈನ್ ಬುಕಿಂಗ್ ಆಗುತ್ತಿಲ್ಲ. ಶೇ 30 ಕ್ಕಿಂತ ಪ್ರಯಾಣಿಕರ ಸಂಖ್ಯೆ ಕಡಿಮೆಯಾದರೆ, ಬಸ್ ಸಂಚಾರ ರದ್ದುಗೊಳಿಸುವ ಅನಿವಾರ್ಯತೆ ನಿರ್ಮಾಣವಾಗುತ್ತಿದೆ. ಬೆಂಗಳೂರಿಗೆ ಶನಿವಾರ ಮತ್ತು ಭಾನುವಾರ ವಾರಾಂತ್ಯದ ದಿನಗಳಲ್ಲಿ ಮಾತ್ರ ಬುಕಿಂಗ್ ಆಗುತ್ತಿವೆ. ಇನ್ನುಳಿದ ದಿನಗಳಲ್ಲಿ ಜನರು ಬೆಂಗಳೂರಿನತ್ತ ಹೋಗುತ್ತಿಲ್ಲ.</p>.<p>‘ಬೆಂಗಳೂರು ಮಾರ್ಗದಲ್ಲಿ ಹೋಗುತ್ತಿದ್ದ ಬಸ್ಗಳಿಂದಾಗಿ ಕಳೆದ ಒಂದು ವಾರದಲ್ಲಿ ₹6 ಲಕ್ಷ ನಷ್ಟವಾಗಿದೆ. ಎಂಟು ಡಿಪೋಗಳನ್ನು ಒಳಗೊಂಡಿರುವ ರಾಯಚೂರು ವಿಭಾಗದಲ್ಲಿ ಪ್ರತಿದಿನ ₹50 ಲಕ್ಷ ಆದಾಯ ಸಂಗ್ರಹ ಆಗುತ್ತಿತ್ತು. ಈಗ ₹3 ರಿಂದ ₹4 ಲಕ್ಷ ಆದಾಯ ಸಂಗ್ರಹ ಕಡಿಮೆ ಆಗಿದೆ. ಕೆಂಪು ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಅಷ್ಟೊಂದು ಕಡಿಮೆ ಆಗಿಲ್ಲ’ ಎನ್ನುವುದು ಎನ್ಇಕೆಆರ್ಟಿಸಿ ಅಧಿಕಾರಿಗಳ ವಿವರಣೆ.</p>.<p><strong>ಮುನ್ನಚ್ಚರಿಕೆ</strong></p>.<p>ಸದಾ ಜನಜಂಗುಳಿ ಮಧ್ಯೆ ಕಾರ್ಯನಿರ್ವಹಿಸುವ ಎನ್ಇಕೆಆರ್ಟಿಸಿ ಚಾಲಕರು, ನಿರ್ವಾಹಕರು, ನಿಲ್ದಾಣದ ಅಧಿಕಾರಿಗಳು ಹಾಗೂ ಡಿಪೋ ಸಿಬ್ಬಂದಿಯ ಆರೋಗ್ಯ ಸುರಕ್ಷತೆಗಾಗಿ ‘ಕೋವಿಡ್–19’ ತಡೆಗಾಗಿ ಎನ್ಇಕೆಆರ್ಟಿಸಿ ರಾಯಚೂರು ವಿಭಾಗವು ಮುನ್ನಚ್ಚರಿಕೆ ಕ್ರಮ ಕೈಗೊಂಡಿದೆ.</p>.<p>ಬಸ್ ನಿಲ್ದಾಣಗಳಲ್ಲಿ, ಬಸ್ಗಳಲ್ಲಿ ಮತ್ತು ಕಚೇರಿಗಳಲ್ಲಿ ವ್ಯಾಪಕ ಶುಚಿತ್ವ ಅಭಿಯಾನ ಆರಂಭಿಸಿದೆ. ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸ್ವಚ್ಛತೆ ಕಾರ್ಯ ಭರದಿಂದ ನಡೆಯಿತು. ಶುಚಿತ್ವ ಕಾಪಾಡಿಕೊಂಡು ‘ವೈರಸ್’ ಮುಕ್ತರಾಗಿ ಕರ್ತವ್ಯ ನಿರ್ವಹಿಸುವ ಕುರಿತು ವಿಶೇಷ ಜಾಗೃತಿ ಸಭೆಗಳನ್ನು ನಡೆಸಲಾಗಿದೆ. ಕಳೆದ ವಾರ ರಾಯಚೂರು ವಿಭಾಗೀಯ ಕಚೇರಿಯಿಂದ ಚಾಲಕರು, ನಿರ್ವಾಹಕರು ಹಾಗೂ ಅಧಿಕಾರಿಗಳಿಗೆಲ್ಲ ಒಟ್ಟು ಒಂದು ಸಾವಿರ ‘ಮುಖಗವುಸು’ಗಳನ್ನು ಉಚಿತವಾಗಿ ವಿತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>