ಬಸ್ ನಿಲ್ದಾಣಗಳಲ್ಲಿ, ಬಸ್ಗಳಲ್ಲಿ ಮತ್ತು ಕಚೇರಿಗಳಲ್ಲಿ ವ್ಯಾಪಕ ಶುಚಿತ್ವ ಅಭಿಯಾನ ಆರಂಭಿಸಿದೆ. ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸ್ವಚ್ಛತೆ ಕಾರ್ಯ ಭರದಿಂದ ನಡೆಯಿತು. ಶುಚಿತ್ವ ಕಾಪಾಡಿಕೊಂಡು ‘ವೈರಸ್’ ಮುಕ್ತರಾಗಿ ಕರ್ತವ್ಯ ನಿರ್ವಹಿಸುವ ಕುರಿತು ವಿಶೇಷ ಜಾಗೃತಿ ಸಭೆಗಳನ್ನು ನಡೆಸಲಾಗಿದೆ. ಕಳೆದ ವಾರ ರಾಯಚೂರು ವಿಭಾಗೀಯ ಕಚೇರಿಯಿಂದ ಚಾಲಕರು, ನಿರ್ವಾಹಕರು ಹಾಗೂ ಅಧಿಕಾರಿಗಳಿಗೆಲ್ಲ ಒಟ್ಟು ಒಂದು ಸಾವಿರ ‘ಮುಖಗವುಸು’ಗಳನ್ನು ಉಚಿತವಾಗಿ ವಿತರಿಸಲಾಗಿದೆ.