<p><strong>ಸಿರವಾರ:</strong> ಲಾಕ್ಡೌನ್ ನಿಯಮಗಳನ್ನು ಮೀರಿ ಅಂಗಡಿ ತೆರೆದ ಮಾಲೀಕರು, ಅನವಶ್ಯಕವಾಗಿ ತಿರುಗಾಡಿದ ವಾಹನ ಸವಾರರಿಗೆ ಪೊಲೀಸ್, ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ದಂಡ ವಿಧಿಸಿದರು.</p>.<p>ಕೆಲ ವ್ಯಾಪಾರಿಗಳು ಸಮಯ ಮೀರಿ ವ್ಯವಹಾರ ನಡೆಸುತ್ತಿದ್ದರು. ಅಧಿಕಾರಿಗಳು ಅಂಗಡಿಗಳನ್ನು ಬಂದ್ ಮಾಡಿಸಿ ದಂಡ ವಸೂಲಿ ಮಾಡಿದರು.</p>.<p>ಮಾಸ್ಕ್ ಹಾಕದೇ ಅನವಶ್ಯಕವಾಗಿ ತಿರುಗಾಡುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಹಶೀಲ್ದಾರ್ ವಿಜಯೇಂದ್ರ ಹುಲಿ ನಾಯಕ ಹಾಗೂ ಪಿಎಸ್ಐ ಸುಜಾತ ನಾಯಕ ತಡೆದು ದಂಡ ಹಾಕುವ ಜತೆಗೆ ವಾಹನಗಳನ್ನು ಜಪ್ತಿ ಮಾಡಿದರು.</p>.<p>‘ಎರಡು ದಿನಗಳಲ್ಲಿ 40 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ತರಕಾರಿ ವ್ಯಾಪಾರ ಆರಂಭ: </strong>ಅಂಗಡಿಯಲ್ಲಿಯೇ ತರಕಾರಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ವ್ಯಾಪಾರ ಬಂದ್ ಮಾಡಿದ್ದ ವ್ಯಾಪಾರಿಗಳ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.</p>.<p>ಶುಕ್ರವಾರದಿಂದ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣ, ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣ ಮತ್ತು ದೇವದುರ್ಗ ರಸ್ತೆಯ ಚುಕ್ಕಿ ಕಲ್ಯಾಣ ಮಂಟಪದ ಎದುರಿನ ಖಾಲಿ ಆವರಣದಲ್ಲಿ ತರಕಾರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ಲಾಕ್ಡೌನ್ ನಿಯಮಗಳನ್ನು ಮೀರಿ ಅಂಗಡಿ ತೆರೆದ ಮಾಲೀಕರು, ಅನವಶ್ಯಕವಾಗಿ ತಿರುಗಾಡಿದ ವಾಹನ ಸವಾರರಿಗೆ ಪೊಲೀಸ್, ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ದಂಡ ವಿಧಿಸಿದರು.</p>.<p>ಕೆಲ ವ್ಯಾಪಾರಿಗಳು ಸಮಯ ಮೀರಿ ವ್ಯವಹಾರ ನಡೆಸುತ್ತಿದ್ದರು. ಅಧಿಕಾರಿಗಳು ಅಂಗಡಿಗಳನ್ನು ಬಂದ್ ಮಾಡಿಸಿ ದಂಡ ವಸೂಲಿ ಮಾಡಿದರು.</p>.<p>ಮಾಸ್ಕ್ ಹಾಕದೇ ಅನವಶ್ಯಕವಾಗಿ ತಿರುಗಾಡುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಹಶೀಲ್ದಾರ್ ವಿಜಯೇಂದ್ರ ಹುಲಿ ನಾಯಕ ಹಾಗೂ ಪಿಎಸ್ಐ ಸುಜಾತ ನಾಯಕ ತಡೆದು ದಂಡ ಹಾಕುವ ಜತೆಗೆ ವಾಹನಗಳನ್ನು ಜಪ್ತಿ ಮಾಡಿದರು.</p>.<p>‘ಎರಡು ದಿನಗಳಲ್ಲಿ 40 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ತರಕಾರಿ ವ್ಯಾಪಾರ ಆರಂಭ: </strong>ಅಂಗಡಿಯಲ್ಲಿಯೇ ತರಕಾರಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ವ್ಯಾಪಾರ ಬಂದ್ ಮಾಡಿದ್ದ ವ್ಯಾಪಾರಿಗಳ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.</p>.<p>ಶುಕ್ರವಾರದಿಂದ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣ, ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣ ಮತ್ತು ದೇವದುರ್ಗ ರಸ್ತೆಯ ಚುಕ್ಕಿ ಕಲ್ಯಾಣ ಮಂಟಪದ ಎದುರಿನ ಖಾಲಿ ಆವರಣದಲ್ಲಿ ತರಕಾರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>