<p><strong>ರಾಯಚೂರು:</strong> ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಜಿಲ್ಲಾ ಜೆಡಿಎಸ್ ವತಿಯಿಂದ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.<br /><br />ಜಿಲ್ಲಾ ಕ್ರೀಡಾಂಗಣ ಪಕ್ಕದಲ್ಲಿರುವ ಮಹಾತ್ಮ ಗಾಂಧೀಜಿ ಪುತ್ಥಳಿ ಹತ್ತಿರ ಪ್ರಾರ್ಥನೆ ಆಯೋಜಿಸಲಾಗಿತ್ತು. ಹಿಂದೂ, ಕ್ರೈಸ್ತ, ಮುಸ್ಲಿಂ ಹಾಗೂ ಜೈನ್ ಧರ್ಮದ ಗುರುಗಳಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು.<br /><br />ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವಿರೂಪಾಕ್ಷಿ ಮಾತನಾಡಿ, ‘ನಮ್ಮ ನಾಯಕರಾದ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಬೇಗನೆ ಗುಣಮುಖ ಹೊಂದಲಿ ಎಂದು ಪಕ್ಷದ ಪ್ರಾರ್ಥನೆ ಮಾಡಲಾಗಿದೆ. ಅವರು ಮತ್ತೆ ಆರೋಗ್ಯ ಹೊಂದಿ ಪಕ್ಷದ ಸಂಘಟನೆಯಯಲ್ಲಿ ತೊಡಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ’ ಎಂದರು.<br /><br />ಮುಖಂಡರ ಮಹಾಂತೇಶ ಪಾಟೀಲ, ಯೂಫಸ್ ಖಾನ್, ಎನ್. ಶಿವಶಂಕರ, ತಿಮ್ಮಾರೆಡ್ಡಿ, ಅಜಿತ ಸೇಠ, ರಾಮಕೃಷ್ಣ, ಆದಿರಾಜ, ವಿಶ್ವನಾಥ ಪಟ್ಟಿ, ನರಸಪ್ಪ ಆಶಾಪೂರ, ಅಮ್ಜದ, ಬಬ್ಲು, ಯಮಿನಿ, ಮಹೇಶ,ವೆಂಕಟೇಶ,ಕುಮಾರಸ್ವಾಮಿ, ಪಾರ್ಥ, ಈರಣ್ಣ ಯಾದವ, ನರಸಿಂಹಲು ಇದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/former-prime-minister-hd-deve-gowda-and-wife-chennamma-have-tested-positive-for-covid19-self-818077.html" target="_blank">ಎಚ್.ಡಿ.ದೇವೇಗೌಡ ದಂಪತಿಗೆ ಕೋವಿಡ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಜಿಲ್ಲಾ ಜೆಡಿಎಸ್ ವತಿಯಿಂದ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.<br /><br />ಜಿಲ್ಲಾ ಕ್ರೀಡಾಂಗಣ ಪಕ್ಕದಲ್ಲಿರುವ ಮಹಾತ್ಮ ಗಾಂಧೀಜಿ ಪುತ್ಥಳಿ ಹತ್ತಿರ ಪ್ರಾರ್ಥನೆ ಆಯೋಜಿಸಲಾಗಿತ್ತು. ಹಿಂದೂ, ಕ್ರೈಸ್ತ, ಮುಸ್ಲಿಂ ಹಾಗೂ ಜೈನ್ ಧರ್ಮದ ಗುರುಗಳಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು.<br /><br />ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವಿರೂಪಾಕ್ಷಿ ಮಾತನಾಡಿ, ‘ನಮ್ಮ ನಾಯಕರಾದ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಬೇಗನೆ ಗುಣಮುಖ ಹೊಂದಲಿ ಎಂದು ಪಕ್ಷದ ಪ್ರಾರ್ಥನೆ ಮಾಡಲಾಗಿದೆ. ಅವರು ಮತ್ತೆ ಆರೋಗ್ಯ ಹೊಂದಿ ಪಕ್ಷದ ಸಂಘಟನೆಯಯಲ್ಲಿ ತೊಡಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ’ ಎಂದರು.<br /><br />ಮುಖಂಡರ ಮಹಾಂತೇಶ ಪಾಟೀಲ, ಯೂಫಸ್ ಖಾನ್, ಎನ್. ಶಿವಶಂಕರ, ತಿಮ್ಮಾರೆಡ್ಡಿ, ಅಜಿತ ಸೇಠ, ರಾಮಕೃಷ್ಣ, ಆದಿರಾಜ, ವಿಶ್ವನಾಥ ಪಟ್ಟಿ, ನರಸಪ್ಪ ಆಶಾಪೂರ, ಅಮ್ಜದ, ಬಬ್ಲು, ಯಮಿನಿ, ಮಹೇಶ,ವೆಂಕಟೇಶ,ಕುಮಾರಸ್ವಾಮಿ, ಪಾರ್ಥ, ಈರಣ್ಣ ಯಾದವ, ನರಸಿಂಹಲು ಇದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/former-prime-minister-hd-deve-gowda-and-wife-chennamma-have-tested-positive-for-covid19-self-818077.html" target="_blank">ಎಚ್.ಡಿ.ದೇವೇಗೌಡ ದಂಪತಿಗೆ ಕೋವಿಡ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>