<p><strong>ಕವಿತಾಳ:</strong> ಸರ್ಕಾರಿ ಶಾಲೆ ಸಮೀಪದಲ್ಲಿ ಅಂತ್ಯಕ್ರಿಯೆ ಮಾಡಲು ಉಟಕನೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಮೀಪದ ಧೋತರಬಂಡಿ ಹಾಗೂ ಊಟಕನೂರು ಗ್ರಾಮಸ್ಥರ ನಡುವೆ ಭಾನುವಾರ ವಾಗ್ವಾದ ನಡೆಯಿತು.</p>.<p>ಸ್ಥಳಕ್ಕೆ ಭೇಟಿ ನೀಡಿದ ಮಾನ್ವಿ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಮತ್ತು ಕವಿತಾಳ ಪಿಎಸ್ಐ ಗುರುಚಂದ್ರ ಯಾದವ ಅವರು ಗ್ರಾಮಸ್ಥರಿಗೆ ತಿಳಿ ಹೇಳಿ ಅಂತ್ಯಕ್ರಿಯೆ ಮಾಡಿಸಿದರು.</p>.<p>ಊಟಕನೂರು ಸರ್ಕಾರಿ ಪ್ರೌಢಶಾಲೆ ಹತ್ತಿರ 2 ಎಕರೆ ಭೂಮಿಯನ್ನು ಸರ್ಕಾರ ಸ್ಮಶಾನಕ್ಕಾಗಿ ಮಂಜೂರು ಮಾಡಿದೆ. ಭಾನುವಾರ ನಿಧನರಾದ ದೋತರಬಂಡಿ ಗ್ರಾಮದ ರಾಮಾಂಜನೇಯ ಅವರ ಅಂತ್ಯಕ್ರಿಯೆಗೆ ಧೋತರಬಂಡಿ ಗ್ರಾಮಸ್ಥರು ಮುಂದಾದಾಗ ಶಾಲೆಯ ಹತ್ತಿರ ಅಂತ್ಯಕ್ರಿಯೆ ಮಾಡುವುದು ಬೇಡ ಎಂದು ಊಟಕನೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಷಯವಾಗಿ ಎರಡು ಗ್ರಾಮಸ್ಥರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪರಿಸ್ಥಿತಿ ಕೈ ಮೀರುವ ಹಂತದಲ್ಲಿ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಶಾಲೆಗೆ ಸಂಬಂಧಿಸಿದ ಜಾಗದ ಸರ್ವೆ ಕೈಗೊಂಡು ಸೂಕ್ತ ಸ್ಥಳ ನಿಗದಿ ಮಾಡುವುದಾಗಿ ಭರವಸೆ ನೀಡಿದರು.</p>.<p>‘ಸ್ಮಶಾನಕ್ಕೆ ಸರ್ವೆ ನಂಬರ್ ಗುರುತಿಸಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ಅದರಲ್ಲಿ ಸೂಕ್ತ ಸ್ಥಳವನ್ನು ನಿಗದಿ ಮಾಡಿಲ್ಲ. ಹೀಗಾಗಿ ಗೊಂದಲ ಉಂಟಾಗಿದೆ. ಶೀಘ್ರದಲ್ಲಿಯೇ ಸ್ಥಳ ಗುರುತಿಸಿ ಸಮಸ್ಯೆ ಬಗೆಹರಿಸಲಾಗುವುದು’ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಸರ್ಕಾರಿ ಶಾಲೆ ಸಮೀಪದಲ್ಲಿ ಅಂತ್ಯಕ್ರಿಯೆ ಮಾಡಲು ಉಟಕನೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಮೀಪದ ಧೋತರಬಂಡಿ ಹಾಗೂ ಊಟಕನೂರು ಗ್ರಾಮಸ್ಥರ ನಡುವೆ ಭಾನುವಾರ ವಾಗ್ವಾದ ನಡೆಯಿತು.</p>.<p>ಸ್ಥಳಕ್ಕೆ ಭೇಟಿ ನೀಡಿದ ಮಾನ್ವಿ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಮತ್ತು ಕವಿತಾಳ ಪಿಎಸ್ಐ ಗುರುಚಂದ್ರ ಯಾದವ ಅವರು ಗ್ರಾಮಸ್ಥರಿಗೆ ತಿಳಿ ಹೇಳಿ ಅಂತ್ಯಕ್ರಿಯೆ ಮಾಡಿಸಿದರು.</p>.<p>ಊಟಕನೂರು ಸರ್ಕಾರಿ ಪ್ರೌಢಶಾಲೆ ಹತ್ತಿರ 2 ಎಕರೆ ಭೂಮಿಯನ್ನು ಸರ್ಕಾರ ಸ್ಮಶಾನಕ್ಕಾಗಿ ಮಂಜೂರು ಮಾಡಿದೆ. ಭಾನುವಾರ ನಿಧನರಾದ ದೋತರಬಂಡಿ ಗ್ರಾಮದ ರಾಮಾಂಜನೇಯ ಅವರ ಅಂತ್ಯಕ್ರಿಯೆಗೆ ಧೋತರಬಂಡಿ ಗ್ರಾಮಸ್ಥರು ಮುಂದಾದಾಗ ಶಾಲೆಯ ಹತ್ತಿರ ಅಂತ್ಯಕ್ರಿಯೆ ಮಾಡುವುದು ಬೇಡ ಎಂದು ಊಟಕನೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಷಯವಾಗಿ ಎರಡು ಗ್ರಾಮಸ್ಥರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪರಿಸ್ಥಿತಿ ಕೈ ಮೀರುವ ಹಂತದಲ್ಲಿ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಶಾಲೆಗೆ ಸಂಬಂಧಿಸಿದ ಜಾಗದ ಸರ್ವೆ ಕೈಗೊಂಡು ಸೂಕ್ತ ಸ್ಥಳ ನಿಗದಿ ಮಾಡುವುದಾಗಿ ಭರವಸೆ ನೀಡಿದರು.</p>.<p>‘ಸ್ಮಶಾನಕ್ಕೆ ಸರ್ವೆ ನಂಬರ್ ಗುರುತಿಸಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ಅದರಲ್ಲಿ ಸೂಕ್ತ ಸ್ಥಳವನ್ನು ನಿಗದಿ ಮಾಡಿಲ್ಲ. ಹೀಗಾಗಿ ಗೊಂದಲ ಉಂಟಾಗಿದೆ. ಶೀಘ್ರದಲ್ಲಿಯೇ ಸ್ಥಳ ಗುರುತಿಸಿ ಸಮಸ್ಯೆ ಬಗೆಹರಿಸಲಾಗುವುದು’ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>