ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಡುಹಗಲೇ ಮಹಿಳೆ ಕೈಲಿದ್ದ ಹಣ ದರೋಡೆ: ಪ್ರಕರಣ ದಾಖಲು

Last Updated 8 ನವೆಂಬರ್ 2019, 14:32 IST
ಅಕ್ಷರ ಗಾತ್ರ

ರಾಯಚೂರು: ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಹೊರಟಿದ್ದ ಮಹಿಳೆಯ ಕೈಯಲ್ಲಿದ್ದ ₹53 ಸಾವಿರ ನಗದಿನ ಚೀಲವನ್ನು ದರೋಡೆಕೋರರು ದೋಚಿ ಪರಾರಿಯಾದ ಘಟನೆ ನಗರದ ಮಹಾತ್ಮಗಾಂಧಿ ವೃತ್ತದ ಬಳಿ ಇರುವ ಎಸ್‌ಬಿಐ ಬ್ಯಾಂಕ್ ಶಾಖೆ ಎದುರು ಶುಕ್ರವಾರ ಹಾಡುಹಗಲೆ ನಡೆದಿದೆ.

ಜಲಾಲ ನಗರದ ನಿವಾಸಿ ಮಾಣಿಕ್ಯಮ್ಮ ಅವರ ಹಣ ದರೋಡೆಯಾಗಿದೆ. ಎದುರಿಗೆ ಬಂದ ಯುವಕ ಮಹಿಳೆಯ ಕೈಯಲ್ಲಿ ಇದ್ದ ಹಣದ ಚೀಲ ಕಸಿದುಕೊಂಡು, ರಸ್ತೆಯಲ್ಲಿ ಬೈಕ್‌ನಲ್ಲಿ ಕಾಯುತ್ತಿದ್ದ ತನ್ನ ಸಹಚರನೊಂದಿಗೆ ಪರಾರಿಯಾಗಿದ್ದಾನೆ.

ನಗದು, 2 ಲಕ್ಷ ಮೌಲ್ಯದ ಬಾಂಡ್‌ಗಳು ಮತ್ತು ಬೀರುವಿನ ಕೀಲಿ ಕೈಗಳು ಹಾಗೂ ಚೀಲ ಕಿತ್ತುಕೊಂಡು ಓಡಿ ಹೋಗಿದ್ದಾರೆ. ಘಟನೆ ಸ್ಥಳಕ್ಕೆ ಸದರ್ ಬಜಾರ್ಪೊಲೀಸ್ ಠಾಣೆಯ ಪೊಲೀಸರು ಧಾವಿಸಿ ಪರಿಶೀಲಿಸಿದರು.

ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು, ಅದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT