<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ಜಮೀನಿನಲ್ಲಿ ಸಾಗುವಳಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ 10 ಅಪರಾಧಿಗಳಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ತಾಲ್ಲೂಕಿನ ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019ರ ಜನವರಿ 1ರಂದು ಅಮರೇಶ ಅವರಿಗೆ ಬಲವಂತವಾಗಿ ಕ್ರಿಮಿನಾಶಕ ಕುಡಿಸಿ ಆರೋಪಿಗಳು ಕೊಲೆ ಮಾಡಿದ್ದರು.</p><p>ಬಸಪ್ಪ ಹುಲಗಪ್ಪ, ಶರಣಪ್ಪ ಗೌಂಡಿ, ಹುಲಗಪ್ಪ ಗೌಂಡಿ, ಅಮರೇಶ ಗೌಂಡಿ, ದೇವಪ್ಪ ಗೌಂಡಿ, ಶಂಕ್ರಮ್ಮ ಗೌಂಡಿ, ಯಲ್ಲಮ್ಮ ಭೋವಿ, ಶರಣಪ್ಪ ಭೋವಿ, ಹನುಮವ್ವ ಶರಣಪ್ಪ ಹಾಗೂ ವಿನೋದ</p><p>ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p><p>ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹37,500 ದಂಡ ವಿಧಿಸಿ ಶುಕ್ರವಾರ ಆದೇಶ ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಆರ್.ಎ ಗಡಕರಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ಜಮೀನಿನಲ್ಲಿ ಸಾಗುವಳಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ 10 ಅಪರಾಧಿಗಳಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ತಾಲ್ಲೂಕಿನ ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019ರ ಜನವರಿ 1ರಂದು ಅಮರೇಶ ಅವರಿಗೆ ಬಲವಂತವಾಗಿ ಕ್ರಿಮಿನಾಶಕ ಕುಡಿಸಿ ಆರೋಪಿಗಳು ಕೊಲೆ ಮಾಡಿದ್ದರು.</p><p>ಬಸಪ್ಪ ಹುಲಗಪ್ಪ, ಶರಣಪ್ಪ ಗೌಂಡಿ, ಹುಲಗಪ್ಪ ಗೌಂಡಿ, ಅಮರೇಶ ಗೌಂಡಿ, ದೇವಪ್ಪ ಗೌಂಡಿ, ಶಂಕ್ರಮ್ಮ ಗೌಂಡಿ, ಯಲ್ಲಮ್ಮ ಭೋವಿ, ಶರಣಪ್ಪ ಭೋವಿ, ಹನುಮವ್ವ ಶರಣಪ್ಪ ಹಾಗೂ ವಿನೋದ</p><p>ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p><p>ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹37,500 ದಂಡ ವಿಧಿಸಿ ಶುಕ್ರವಾರ ಆದೇಶ ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಆರ್.ಎ ಗಡಕರಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>