<p><strong>ಸಿಂಧನೂರು: </strong>ಮಳೆಯಿಂದಾಗಿ ಭತ್ತ ಸೇರಿದಂತೆ ಹತ್ತಿ, ಜೋಳ, ತೊಗರಿ, ಮೆಣಸಿನಕಾಯಿ, ಉಳ್ಳಾಗಡ್ಡಿ, ಕಡ್ಲಿ ಮುಂತಾದ ಬೆಳೆಗಳು ನಾಶಗೊಂಡಿವೆ. ರಾಜ್ಯ ಸರ್ಕಾರ ತ್ವರಿಗತಿಯಲ್ಲಿ ಸರ್ವೆ ಕಾರ್ಯ ನಡೆಸಿ ನಷ್ಟ ಹೊಂದಿದ ಎಲ್ಲಾ ರೈತರಿಗೂ ಸಮರ್ಪಕವಾಗಿ ಪರಿಹಾರ ನೀಡಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಆಗ್ರಹಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಯ್ಲಿಗೆ ಬಂದ ಭತ್ತ ನೆಲಕ್ಕುರಳಿದ್ದು, ಎಕರೆಗೆ ₹ 30 ರಿಂದ ₹ 40 ಸಾವಿರ ಹಣ ಖರ್ಚು ಮಾಡಿದ ರೈತರು ಆತಂಕದಲ್ಲಿದ್ದಾರೆ. ತಾಲ್ಲೂಕಿನಲ್ಲಿ ಸುಮಾರು ಎರಡುವರೆ ಲಕ್ಷ ಜಮೀನು ಇದ್ದು ಅದರಲ್ಲಿ ಹೆಚ್ಚು ರೈತರು ಭತ್ತವನ್ನೇ ಬೆಳೆಯುತ್ತಾರೆ. ಈ ಬಾರಿ ಎಕರೆಗೆ 50 ಚೀಲ ಭತ್ತ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣನ ಅವಕೃಪೆಯಿಂದಾಗಿ ಬೆಳೆ ನೆಲಕ್ಕುರುಳಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.</p>.<p>ಬೆಳೆ ಸರ್ವೆ ಕಾರ್ಯದ ವರದಿಯನ್ನು ನ.30 ರೊಳಗೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಆದರೆ ಮಳೆ ಇನ್ನು ನಾಲ್ಕೈದು ದಿನ ಮುಂದುವರೆಯುವ ಲಕ್ಷಣಗಳಿದ್ದು, ವರದಿ ಪಡೆಯುವ ದಿನಾಂಕವನ್ನು ಮುಂದೂಡಬೇಕು. ವಿಮೆ ಮಾಡಿಸಿದ ರೈತರಿಗೆ ಪರಿಹಾರ ಕೊಡುವಾಗ ಷರತ್ತುಗಳನ್ನು ಸರಳಿಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೊಲ್ಲಾ ಶೇಷಗಿರಿರಾವ್ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವನಗೌಡ ಗೊರೆಬಾಳ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಹನುಮೇಶ ಸಾಲಗುಂದಾ, ಮುಖಂಡರಾದ ಪರಮೇಶಪ್ಪ, ಹನುಮಂತಪ್ಪ ವಪ್ಪಲದಿನ್ನಿ, ಸೋಮನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು: </strong>ಮಳೆಯಿಂದಾಗಿ ಭತ್ತ ಸೇರಿದಂತೆ ಹತ್ತಿ, ಜೋಳ, ತೊಗರಿ, ಮೆಣಸಿನಕಾಯಿ, ಉಳ್ಳಾಗಡ್ಡಿ, ಕಡ್ಲಿ ಮುಂತಾದ ಬೆಳೆಗಳು ನಾಶಗೊಂಡಿವೆ. ರಾಜ್ಯ ಸರ್ಕಾರ ತ್ವರಿಗತಿಯಲ್ಲಿ ಸರ್ವೆ ಕಾರ್ಯ ನಡೆಸಿ ನಷ್ಟ ಹೊಂದಿದ ಎಲ್ಲಾ ರೈತರಿಗೂ ಸಮರ್ಪಕವಾಗಿ ಪರಿಹಾರ ನೀಡಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಆಗ್ರಹಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಯ್ಲಿಗೆ ಬಂದ ಭತ್ತ ನೆಲಕ್ಕುರಳಿದ್ದು, ಎಕರೆಗೆ ₹ 30 ರಿಂದ ₹ 40 ಸಾವಿರ ಹಣ ಖರ್ಚು ಮಾಡಿದ ರೈತರು ಆತಂಕದಲ್ಲಿದ್ದಾರೆ. ತಾಲ್ಲೂಕಿನಲ್ಲಿ ಸುಮಾರು ಎರಡುವರೆ ಲಕ್ಷ ಜಮೀನು ಇದ್ದು ಅದರಲ್ಲಿ ಹೆಚ್ಚು ರೈತರು ಭತ್ತವನ್ನೇ ಬೆಳೆಯುತ್ತಾರೆ. ಈ ಬಾರಿ ಎಕರೆಗೆ 50 ಚೀಲ ಭತ್ತ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣನ ಅವಕೃಪೆಯಿಂದಾಗಿ ಬೆಳೆ ನೆಲಕ್ಕುರುಳಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.</p>.<p>ಬೆಳೆ ಸರ್ವೆ ಕಾರ್ಯದ ವರದಿಯನ್ನು ನ.30 ರೊಳಗೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಆದರೆ ಮಳೆ ಇನ್ನು ನಾಲ್ಕೈದು ದಿನ ಮುಂದುವರೆಯುವ ಲಕ್ಷಣಗಳಿದ್ದು, ವರದಿ ಪಡೆಯುವ ದಿನಾಂಕವನ್ನು ಮುಂದೂಡಬೇಕು. ವಿಮೆ ಮಾಡಿಸಿದ ರೈತರಿಗೆ ಪರಿಹಾರ ಕೊಡುವಾಗ ಷರತ್ತುಗಳನ್ನು ಸರಳಿಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೊಲ್ಲಾ ಶೇಷಗಿರಿರಾವ್ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವನಗೌಡ ಗೊರೆಬಾಳ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಹನುಮೇಶ ಸಾಲಗುಂದಾ, ಮುಖಂಡರಾದ ಪರಮೇಶಪ್ಪ, ಹನುಮಂತಪ್ಪ ವಪ್ಪಲದಿನ್ನಿ, ಸೋಮನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>