ಮುಂಗಾರು ಮಳೆಗೆ ವಿವಿಧ ಬೆಳೆಗಳ ಬಿತ್ತನೆ ಮಾಡಿದರು. ಸಜ್ಜೆ ಫಸಲು ಕಾಳು ಕಟ್ಟುವ ಹಂತದಲ್ಲಿ ಜೋರಾಗಿ ಸುರಿದ ಮಳೆಗೆ ಗುಡಿಹಾಳ ಗ್ರಾಮದ ಬಸಪ್ಪ ಎಂಬರ ಸಜ್ಜೆ ಬೆಳೆ ನೆಲಕ್ಕೆ ಬಿದ್ದು ಹಾಳಾಗಿದೆ. ಗುಡಿಹಾಳ, ಮಟ್ಟೂರು, ಜಕ್ಕರಮಡು, ಕನ್ನಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಕೈಗೆ ಬಂದ ಬೆಳೆ ಮಳೆಗೆ ಬೆಳೆ ಹಾಳಾಗುವ ಹಂತದಲ್ಲಿವೆ. ಮೇವು ಜಾನುವಾರುಗಳ ಉಪಯೋಗಕ್ಕೆ ಬಾರದಂತಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.