<p><strong>ಶಕ್ತಿನಗರ</strong>: ‘ಪ್ರವಾಹದಿಂದ ಸಂಭವಿಸಿದ ಮನೆ ಹಾಗೂ ಬೆಳೆ ಹಾನಿ ಕುರಿತು ತ್ವರಿತಗತಿಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಸೂಚನೆ ನೀಡಿದರು.</p>.<p>ಚಂದ್ರಬಂಡಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.</p>.<p>ರೈತರು ತಮ್ಮ ಜಮೀನುಗಳ ಸರ್ವೆ ನಂಬರ್ ಮತ್ತು ಹಿಸ್ಸಾ ನಂಬರ್ವಾರು ತಾವು ಬೆಳೆದ ಬೆಳೆಯ ಮಾಹಿತಿಯನ್ನು ಚಿತ್ರ ಸಹಿತ ನಮೂದಿಸಬೇಕು ಎಂದು ತಿಳಿಸಿದರು.</p>.<p>ಚಂದ್ರಬಂಡಾ ಹೋಬಳಿ ವ್ಯಾಪ್ತಿಯ ಗ್ರಾಮ ಲೆಕ್ಕಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಾಲೇಕಾರರ ಜತೆಗೆ ಚರ್ಚಿಸಿ, ಆತ್ಕೂರು ಮತ್ತು ಡೊಂಗ ರಾಂಪುರ ಗ್ರಾಮಗಳ ಸುತ್ತಮುತ್ತ ಕ್ರಮಬದ್ಧವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದು ಹೇಳಿದರು.</p>.<p>ಉಪ ತಹಶೀಲ್ದಾರ್ ಅನಿಲಕುಮಾರ, ಕಂದಾಯ ನಿರೀಕ್ಷಕ ರಾಮು ಯಾದವ, ಕೃಷಿ ಅಧಿಕಾರಿ ತ್ರಿವೇಣಿ, ಸಹಾಯಕ ಅಧಿಕಾರಿ ಶೋಭಾ, ಮಾಲತಿ, ಗ್ರಾಮ ಲೆಕ್ಕಾಧಿಕಾರಿ ದೇಶಪಾಂಡೆ ಹಾಗೂ ಸಾಬಣ್ಣ ಸೇರಿ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: ‘ಪ್ರವಾಹದಿಂದ ಸಂಭವಿಸಿದ ಮನೆ ಹಾಗೂ ಬೆಳೆ ಹಾನಿ ಕುರಿತು ತ್ವರಿತಗತಿಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಸೂಚನೆ ನೀಡಿದರು.</p>.<p>ಚಂದ್ರಬಂಡಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.</p>.<p>ರೈತರು ತಮ್ಮ ಜಮೀನುಗಳ ಸರ್ವೆ ನಂಬರ್ ಮತ್ತು ಹಿಸ್ಸಾ ನಂಬರ್ವಾರು ತಾವು ಬೆಳೆದ ಬೆಳೆಯ ಮಾಹಿತಿಯನ್ನು ಚಿತ್ರ ಸಹಿತ ನಮೂದಿಸಬೇಕು ಎಂದು ತಿಳಿಸಿದರು.</p>.<p>ಚಂದ್ರಬಂಡಾ ಹೋಬಳಿ ವ್ಯಾಪ್ತಿಯ ಗ್ರಾಮ ಲೆಕ್ಕಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಾಲೇಕಾರರ ಜತೆಗೆ ಚರ್ಚಿಸಿ, ಆತ್ಕೂರು ಮತ್ತು ಡೊಂಗ ರಾಂಪುರ ಗ್ರಾಮಗಳ ಸುತ್ತಮುತ್ತ ಕ್ರಮಬದ್ಧವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದು ಹೇಳಿದರು.</p>.<p>ಉಪ ತಹಶೀಲ್ದಾರ್ ಅನಿಲಕುಮಾರ, ಕಂದಾಯ ನಿರೀಕ್ಷಕ ರಾಮು ಯಾದವ, ಕೃಷಿ ಅಧಿಕಾರಿ ತ್ರಿವೇಣಿ, ಸಹಾಯಕ ಅಧಿಕಾರಿ ಶೋಭಾ, ಮಾಲತಿ, ಗ್ರಾಮ ಲೆಕ್ಕಾಧಿಕಾರಿ ದೇಶಪಾಂಡೆ ಹಾಗೂ ಸಾಬಣ್ಣ ಸೇರಿ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>