<p><strong>ರಾಯಚೂರು</strong>: ‘ಮಳೆಯಿಂದ ಜಿಲ್ಲೆಯಲ್ಲಿ ಹಾನಿಯಾದ ಬೆಳೆ ಸಮೀಕ್ಷಾ ಕಾರ್ಯ ನವೆಂಬರ್ 30ರೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡುವುದಕ್ಕೆ ತಿಳಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ ನಾಶವಾಗಿದೆ. ಒಟ್ಟು 49,953 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ಈ ವರ್ಷ ಮಳೆಯಿಂದಾಗಿ ರೈತರು ಬೆಳೆ ಮುಟ್ಟದಂತಹ ಪರಿಸ್ಥಿತಿಯಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು.</p>.<p>‘ವಿಧಾನ ಪರಿಷತ್ ಚುನಾವಣೆಯಲ್ಲಿ ರಾಯಚೂರಿನಲ್ಲಿ ನಾವೇ ಗೆಲ್ಲುತ್ತೇವೆ. ನಮ್ಮ ನಾಯಕರು ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಮಳೆಯಿಂದ ಜಿಲ್ಲೆಯಲ್ಲಿ ಹಾನಿಯಾದ ಬೆಳೆ ಸಮೀಕ್ಷಾ ಕಾರ್ಯ ನವೆಂಬರ್ 30ರೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡುವುದಕ್ಕೆ ತಿಳಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ ನಾಶವಾಗಿದೆ. ಒಟ್ಟು 49,953 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ಈ ವರ್ಷ ಮಳೆಯಿಂದಾಗಿ ರೈತರು ಬೆಳೆ ಮುಟ್ಟದಂತಹ ಪರಿಸ್ಥಿತಿಯಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು.</p>.<p>‘ವಿಧಾನ ಪರಿಷತ್ ಚುನಾವಣೆಯಲ್ಲಿ ರಾಯಚೂರಿನಲ್ಲಿ ನಾವೇ ಗೆಲ್ಲುತ್ತೇವೆ. ನಮ್ಮ ನಾಯಕರು ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>