ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಸಿಂಧನೂರು | ಸೈಬರ್ ಅಪರಾಧ ತಡೆಗೆ ಮುನ್ನೆಚ್ಚರಿಕೆ ಅಗತ್ಯ: ಎಂ.ಪುಟ್ಟಮಾದಯ್ಯ

ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ: ವಿದ್ಯಾರ್ಥಿಗಳಿಗೆ ಜಾಗೃತಿ
Published : 13 ಡಿಸೆಂಬರ್ 2025, 7:16 IST
Last Updated : 13 ಡಿಸೆಂಬರ್ 2025, 7:16 IST
ಫಾಲೋ ಮಾಡಿ
Comments
ಸೈಬರ್ ವಂಚನೆಗಳಾದ ಫಿಶಿಂಗ್ ಡೀಪ್ ಫೇಕ್‍ಗಳು ಮತ್ತು ಆನ್‍ಲೈನ್ ಬೆಟ್ಟಿಂಗ್‍ಗಳಂಥ ಅಪರಾಧಗಳನ್ನು ತಡೆಯಲು ತಂತ್ರಜ್ಞಾನ ಮತ್ತು ತರಬೇತಿ ಮುಖ್ಯವಾಗಿದ್ದು ಸುರಕ್ಷಿತ ಡಿಜಿಟಲ್ ಕರ್ನಾಟಕ ನಿರ್ಮಾಣಕ್ಕೆ ಎಲ್ಲರೂ ಜಾಗೃತರಾಗಿ ಸಹಕರಿಸಬೇಕಿದೆ
ಎಂ.ಪುಟ್ಟಮಾದಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ವಿದ್ಯಾರ್ಥಿಗಳಿಗೆ ನಗದು ಬಹುಮಾನ
ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯು ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ‘ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಸಾಧ್ಯವೇ’ ಎಂಬ ವಿಷಯದ ಮೇಲೆ ಭಾಷಣ ಸ್ಪರ್ಧೆ ಏರ್ಪಡಿಸಿತ್ತು. ಆ ಸ್ಪರ್ಧೆಯಲ್ಲಿ ಆಕ್ಸ್‌ಫರ್ಡ್‌ ಕಾಲೇಜಿನ ವಿದ್ಯಾರ್ಥಿ ಜಾಫರ್ ಪ್ರಥಮ ಅನಿಕೇತನ ಕಾಲೇಜು ವಿದ್ಯಾರ್ಥಿ ಗೌತಮ್ ದ್ವಿತೀಯ ಎಲ್‍ಬಿಕೆ ಕಾಲೇಜಿನ ವಿದ್ಯಾರ್ಥಿನಿ ಬಸಮ್ಮ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಅಜಯ್ ಪ್ರಥಮ ವಿಸಿಬಿ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ದ್ವಿತೀಯ ಪಾಟೀಲ ಕಾಲೇಜಿನ ವಿದ್ಯಾರ್ಥಿ ಅಮರೇಶ ತೃತೀಯ ಸ್ಥಾನ ಪಡೆದಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿ ಹಾಗೂ ರಾಷ್ಟ್ರೀಯ ಐಕ್ಯತಾ ದಿನ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಾಸವಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಾರ್ಥನಾ ಪ್ರಥಮ ವಳಬಳ್ಳಾರಿ ಚನ್ನಬಸವೇಶ್ವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮರೇಗೌಡ ದ್ವಿತೀಯ ಹಾಗೂ ವೀರಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರೇಶ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಥಮ ಬಹುಮಾನ ₹5 ಸಾವಿರ ದ್ವಿತೀಯ ಬಹುಮಾನ ₹3 ಸಾವಿರ ತೃತೀಯ ಬಹುಮಾನ ₹2 ಸಾವಿರ ಹಾಗೂ ಪ್ರಶಂಸನೀಯ ಪತ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT