<p><strong>ಸಿಂಧನೂರು:</strong> ಆಧುನಿಕ ತಂತ್ರಜ್ಞಾನದಿಂದ ಜಗತ್ತು ಅತ್ಯಂತ ಚಿಕ್ಕದಾಗಿದೆ. ಆದರೆ ಸಮಾಜದಲ್ಲಿ ಸೈಬರ್ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಡಿವೈಎಸ್ಪಿ ಚಂದ್ರಶೇಖರ ಜಿ ನಾಯಕ ವಿಷಾದ ವ್ಯಕ್ತಪಡಿಸಿದರು.</p>.<p>ನಗರದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪೊಲೀಸ್ ಇಲಾಖೆಯ ಸಿಂಧನೂರು ಉಪವಿಭಾಗದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸೈಬರ್ ಸುರಕ್ಷತಾ ಸೈಕಲ್ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದ 90 ಕೋಟಿ ಜನರು ಮೊಬೈಲ್ ಬಳಕೆ ಮಾಡುತ್ತಿದ್ದು, ಅದರಲ್ಲಿ ಶೇ 85ರಷ್ಟು ಜನರು ಸ್ಮಾರ್ಟ್ಫೋನ್ ಬಳಸುವ ಮೂಲಕ ಅಂತರ್ಜಾಲ ಉಪಯೋಗ ಮಾಡುತ್ತಿದ್ದಾರೆ. ದೇಶದ ಯಾವುದೇ ಮೂಲೆಯಿಂದಾದರೂ ಮಾಹಿತಿ ಪಡೆದುಕೊಳ್ಳಬಹುದು ಎಂದರು.</p>.<p>45 ಕೋಟಿ ಜನರು ಸೈಬರ್ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಆದರೆ ಈ ತರಹದ ಪ್ರಕರಣಗಳನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಕಾರಣ ಅಪರಾಧಗಳ ಬಗ್ಗೆ ಜನರನ್ನು ಜಾಗೃತಿಗೊಳಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಸೈಕಲ್ ಜಾಥಾ ಮಾಡಲಾಗುತ್ತಿದೆ. ಇನ್ನು ಮುಂದಾದರೂ ಜನರು ಸೈಬರ್ ಮೋಸಕ್ಕೆ ಒಳಗಾಗಬಾರದು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಅರುಣ್ ದೇಸಾಯಿ,ದೇಶದಾದ್ಯಂತ ಸೈಬರ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಅದರಲ್ಲಿ ಯುವಕರು ಹೆಚ್ಚು ಮೋಸ ಹೋಗುವದು ಕಂಡು ಬರುತ್ತಿದೆ. ಆದ್ದರಿಂದ ನಿಮ್ಮ ಪಾಸ್ವರ್ಡ್ಗಳನ್ನು ಬದಲಾವಣೆ ಮಾಡುತ್ತಿರಬೇಕು ಎಂದು ಹೇಳಿದರು.</p>.<p>ನಗರ ಪೊಲೀಸ್ ಠಾಣೆಯ ಪಿಐ ವೀರಾರೆಡ್ಡಿ, ಸೈಬರ್ ಅಪರಾಧರ ತಡೆಯಲು ಪೊಲೀಸ್ ಇಲಾಖೆಯ ಜೊತೆ ಶಿಕ್ಷಣ ಇಲಾಖೆಯ ಕೈ ಜೋಡಿಸಬೇಕು. ಶಿಕ್ಷಣ ಇಲಾಖೆಯಿಂದ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.</p>.<p>ಶಿಕ್ಷಣಾಧಿಕಾರಿ ಬಸಲಿಂಗಪ್ಪ ಜವಳಗೇರಾ, ತಾಲ್ಲೂಕು ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಮಾತನಾಡಿದರು.</p>.<p>ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ ಹಿರೇಮಠ, ಸನ್ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಸೈಕಲ್ ಜಾಥಾ ಭಾಗವಹಿಸಿದ್ದರು.</p>.<div><blockquote>ಸೈಬರ್ ಅಪರಾಧ ಕೃತ್ಯಗಳಿಗೆ ಯುವ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ </blockquote><span class="attribution">ಅರುಣ್ದೇಸಾಯಿ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ಆಧುನಿಕ ತಂತ್ರಜ್ಞಾನದಿಂದ ಜಗತ್ತು ಅತ್ಯಂತ ಚಿಕ್ಕದಾಗಿದೆ. ಆದರೆ ಸಮಾಜದಲ್ಲಿ ಸೈಬರ್ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಡಿವೈಎಸ್ಪಿ ಚಂದ್ರಶೇಖರ ಜಿ ನಾಯಕ ವಿಷಾದ ವ್ಯಕ್ತಪಡಿಸಿದರು.</p>.<p>ನಗರದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪೊಲೀಸ್ ಇಲಾಖೆಯ ಸಿಂಧನೂರು ಉಪವಿಭಾಗದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸೈಬರ್ ಸುರಕ್ಷತಾ ಸೈಕಲ್ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದ 90 ಕೋಟಿ ಜನರು ಮೊಬೈಲ್ ಬಳಕೆ ಮಾಡುತ್ತಿದ್ದು, ಅದರಲ್ಲಿ ಶೇ 85ರಷ್ಟು ಜನರು ಸ್ಮಾರ್ಟ್ಫೋನ್ ಬಳಸುವ ಮೂಲಕ ಅಂತರ್ಜಾಲ ಉಪಯೋಗ ಮಾಡುತ್ತಿದ್ದಾರೆ. ದೇಶದ ಯಾವುದೇ ಮೂಲೆಯಿಂದಾದರೂ ಮಾಹಿತಿ ಪಡೆದುಕೊಳ್ಳಬಹುದು ಎಂದರು.</p>.<p>45 ಕೋಟಿ ಜನರು ಸೈಬರ್ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಆದರೆ ಈ ತರಹದ ಪ್ರಕರಣಗಳನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಕಾರಣ ಅಪರಾಧಗಳ ಬಗ್ಗೆ ಜನರನ್ನು ಜಾಗೃತಿಗೊಳಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಸೈಕಲ್ ಜಾಥಾ ಮಾಡಲಾಗುತ್ತಿದೆ. ಇನ್ನು ಮುಂದಾದರೂ ಜನರು ಸೈಬರ್ ಮೋಸಕ್ಕೆ ಒಳಗಾಗಬಾರದು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಅರುಣ್ ದೇಸಾಯಿ,ದೇಶದಾದ್ಯಂತ ಸೈಬರ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಅದರಲ್ಲಿ ಯುವಕರು ಹೆಚ್ಚು ಮೋಸ ಹೋಗುವದು ಕಂಡು ಬರುತ್ತಿದೆ. ಆದ್ದರಿಂದ ನಿಮ್ಮ ಪಾಸ್ವರ್ಡ್ಗಳನ್ನು ಬದಲಾವಣೆ ಮಾಡುತ್ತಿರಬೇಕು ಎಂದು ಹೇಳಿದರು.</p>.<p>ನಗರ ಪೊಲೀಸ್ ಠಾಣೆಯ ಪಿಐ ವೀರಾರೆಡ್ಡಿ, ಸೈಬರ್ ಅಪರಾಧರ ತಡೆಯಲು ಪೊಲೀಸ್ ಇಲಾಖೆಯ ಜೊತೆ ಶಿಕ್ಷಣ ಇಲಾಖೆಯ ಕೈ ಜೋಡಿಸಬೇಕು. ಶಿಕ್ಷಣ ಇಲಾಖೆಯಿಂದ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.</p>.<p>ಶಿಕ್ಷಣಾಧಿಕಾರಿ ಬಸಲಿಂಗಪ್ಪ ಜವಳಗೇರಾ, ತಾಲ್ಲೂಕು ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಮಾತನಾಡಿದರು.</p>.<p>ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ ಹಿರೇಮಠ, ಸನ್ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಸೈಕಲ್ ಜಾಥಾ ಭಾಗವಹಿಸಿದ್ದರು.</p>.<div><blockquote>ಸೈಬರ್ ಅಪರಾಧ ಕೃತ್ಯಗಳಿಗೆ ಯುವ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ </blockquote><span class="attribution">ಅರುಣ್ದೇಸಾಯಿ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>