<p><strong>ರಾಯಚೂರು</strong>: ಮಹಿಳೆಯರ ಮೇಲಿನ ಅತ್ಯಾಚಾರ, ಕಿರುಕುಳ ಪ್ರಕರಣ ತಡೆಗಟ್ಟಬೇಕು ಎಂದು ಒತ್ತಾಯಿಸಿ ಯುವಕ ಕಿರಣ ವಿ. ಅವರು ಸೈಕಲ್ ಮೂಲಕ ಬೆಂಗಳೂರಿನ ಬನ್ನೀರುಘಟ್ಟದಿಂದ ರಾಜ್ಯ ಪ್ರವಾಸ ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ. ಶುಕ್ರವಾರ ರಾಯಚೂರಿಗೂ ಬಂದಿದ್ದರು.</p>.<p>ಆಗಸ್ಟ್ 22ರಿದ ಬೆಂಗಳೂರಿನ ಬನ್ನೀರುಘಟ್ಟದಿಂದ ಹೊರಟು 3,500 ಕಿ.ಮೀ. ಕ್ರಮಿಸಿ ಈಗಾಗಲೇ 6 ಜಿಲ್ಲೆಗಳನ್ನು ಸುತ್ತಿದ್ದಾರೆ. ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮಹಿಳೆಯರು ಅವರಿಗೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದರು.</p>.<p>ರಾಜ್ಯ ಸೇರಿ ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದ್ದು, ಈಚೆಗೆ ಮೈಸೂರಿನಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡನೀಯ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಕಿರಣ ಸರ್ಕಾರಕ್ಕೆ ಒತ್ತಾಯಿಸಿದರು.</p>.<p>ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳ ಹೆಚ್ಚುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು.</p>.<p>ಸಿಪಿಐಎಂ ಪಕ್ಷದ ಮುಖಂಡ ಕೆ.ಜೆ.ವೀರೇಶ, ರೈತ ಮುಖಂಡ ಲಕ್ಷ್ಮಣಗೌಡ ಕಡಗಂದೊಡ್ಡಿ, ಶಶಿಕಲಾ ಭೀಮರಾಯಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಮಹಿಳೆಯರ ಮೇಲಿನ ಅತ್ಯಾಚಾರ, ಕಿರುಕುಳ ಪ್ರಕರಣ ತಡೆಗಟ್ಟಬೇಕು ಎಂದು ಒತ್ತಾಯಿಸಿ ಯುವಕ ಕಿರಣ ವಿ. ಅವರು ಸೈಕಲ್ ಮೂಲಕ ಬೆಂಗಳೂರಿನ ಬನ್ನೀರುಘಟ್ಟದಿಂದ ರಾಜ್ಯ ಪ್ರವಾಸ ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ. ಶುಕ್ರವಾರ ರಾಯಚೂರಿಗೂ ಬಂದಿದ್ದರು.</p>.<p>ಆಗಸ್ಟ್ 22ರಿದ ಬೆಂಗಳೂರಿನ ಬನ್ನೀರುಘಟ್ಟದಿಂದ ಹೊರಟು 3,500 ಕಿ.ಮೀ. ಕ್ರಮಿಸಿ ಈಗಾಗಲೇ 6 ಜಿಲ್ಲೆಗಳನ್ನು ಸುತ್ತಿದ್ದಾರೆ. ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮಹಿಳೆಯರು ಅವರಿಗೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದರು.</p>.<p>ರಾಜ್ಯ ಸೇರಿ ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದ್ದು, ಈಚೆಗೆ ಮೈಸೂರಿನಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡನೀಯ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಕಿರಣ ಸರ್ಕಾರಕ್ಕೆ ಒತ್ತಾಯಿಸಿದರು.</p>.<p>ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳ ಹೆಚ್ಚುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು.</p>.<p>ಸಿಪಿಐಎಂ ಪಕ್ಷದ ಮುಖಂಡ ಕೆ.ಜೆ.ವೀರೇಶ, ರೈತ ಮುಖಂಡ ಲಕ್ಷ್ಮಣಗೌಡ ಕಡಗಂದೊಡ್ಡಿ, ಶಶಿಕಲಾ ಭೀಮರಾಯಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>