<p>ರಾಯಚೂರು: ‘ಸ್ವಾರ್ಥಕ್ಕಾಗಿ ನಾವು ಪರಿಸರ ನಾಶ ಮಾಡಿ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಲಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಹನಮಂತಪ್ಪ ಎಚ್ಚರಿಸಿದರು.</p>.<p>ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜಾಗತೀಕ ತಾಪಮಾನ ಹೆಚ್ಚಾಗುತ್ತಿದೆ. ಹವಾಮಾನ ವೈಪರೀತ್ಯ ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಬೇಕಿದೆ. ಗಂಡಾಂತರ ತಪ್ಪಿಸಲು ಇದೊಂದೇ ಉಪಾಯ ಇದೆ’ ಎಂದು ತಿಳಿಸಿದರು.</p>.<p>ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಮಾತನಾಡಿ, ‘ರೈತರು ಕೃಷಿಯ ಜತೆಗೆ ಅರಣ್ಯ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಬದುಗಳಲ್ಲಿ ಮತ್ತು ಕಡಿಮೆ ಫಲವತ್ತಾದ ಜಮೀನುಗಳಲ್ಲಿ ಅರಣ್ಯ ಸಸಿಗಳನ್ನು ಬೆಳಸುವುದರಿಂದ ವಾತಾವರಣದ ಶುದ್ಧಿಕರಣದೊಂದಿಗೆ ಲಾಭವನ್ನು ಪಡೆಯಬಹುದು’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಪದಾರ್ಥಗಳನ್ನು ಹಾಕುತ್ತಿರುವುದರಿಂದ ಮಣ್ಣಿನ ಫಲವತ್ತತೆ ನಾಶವಾಗುತ್ತಿದೆ. ರೈತರು ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮಾತನಾಡಿದರು.</p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಆರ್.ಎ.ಪಾಟೀಲ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ವಿ.ಪಾಟೀಲ, ಗ್ರೀನ್ ರಾಯಚೂರಿನ ಉಪಾಧ್ಯಕ್ಷ ಸಿ.ವಿ.ಪಾಟೀಲ, ಕೃಷಿಕ ಸಮಾಜದ ಅದ್ಯಕ್ಷ ಎಸ್.ಎಂ.ಸಿದ್ದಾರೆಡ್ಡಿ, ಎಂ.ಭೀಮಣ್ಣ ಹಾಗೂ ಶರಣಗೌಡ ಹಿರೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಸ್ವಾರ್ಥಕ್ಕಾಗಿ ನಾವು ಪರಿಸರ ನಾಶ ಮಾಡಿ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಲಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಹನಮಂತಪ್ಪ ಎಚ್ಚರಿಸಿದರು.</p>.<p>ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜಾಗತೀಕ ತಾಪಮಾನ ಹೆಚ್ಚಾಗುತ್ತಿದೆ. ಹವಾಮಾನ ವೈಪರೀತ್ಯ ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಬೇಕಿದೆ. ಗಂಡಾಂತರ ತಪ್ಪಿಸಲು ಇದೊಂದೇ ಉಪಾಯ ಇದೆ’ ಎಂದು ತಿಳಿಸಿದರು.</p>.<p>ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಮಾತನಾಡಿ, ‘ರೈತರು ಕೃಷಿಯ ಜತೆಗೆ ಅರಣ್ಯ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಬದುಗಳಲ್ಲಿ ಮತ್ತು ಕಡಿಮೆ ಫಲವತ್ತಾದ ಜಮೀನುಗಳಲ್ಲಿ ಅರಣ್ಯ ಸಸಿಗಳನ್ನು ಬೆಳಸುವುದರಿಂದ ವಾತಾವರಣದ ಶುದ್ಧಿಕರಣದೊಂದಿಗೆ ಲಾಭವನ್ನು ಪಡೆಯಬಹುದು’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಪದಾರ್ಥಗಳನ್ನು ಹಾಕುತ್ತಿರುವುದರಿಂದ ಮಣ್ಣಿನ ಫಲವತ್ತತೆ ನಾಶವಾಗುತ್ತಿದೆ. ರೈತರು ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮಾತನಾಡಿದರು.</p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಆರ್.ಎ.ಪಾಟೀಲ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ವಿ.ಪಾಟೀಲ, ಗ್ರೀನ್ ರಾಯಚೂರಿನ ಉಪಾಧ್ಯಕ್ಷ ಸಿ.ವಿ.ಪಾಟೀಲ, ಕೃಷಿಕ ಸಮಾಜದ ಅದ್ಯಕ್ಷ ಎಸ್.ಎಂ.ಸಿದ್ದಾರೆಡ್ಡಿ, ಎಂ.ಭೀಮಣ್ಣ ಹಾಗೂ ಶರಣಗೌಡ ಹಿರೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>