ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಎರಡನೇ ಅಲೆ: ಮಂತ್ರಾಲಯದಲ್ಲಿ ದರ್ಶನ ಸ್ಥಗಿತ

Last Updated 30 ಏಪ್ರಿಲ್ 2021, 12:52 IST
ಅಕ್ಷರ ಗಾತ್ರ

ರಾಯಚೂರು: ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವುದರಿಂದ ಸುಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಮೇ 1 ರಿಂದ ಭಕ್ತರಿಗೆಲ್ಲ ದರ್ಶನ ಸ್ಥಗಿತಗೊಳಿಸಲಾಗಿದೆ.

ಸ್ಥಳೀಯವಾಗಿ ಲಾಕ್‌ಡೌನ್‌ ವಿಧಿಸಿರುವುದರಿಂದ ಮುಂದಿನ ಸೂಚನೆ ನೀಡುವವರೆಗೂ ಭಕ್ತರಿಗೆ ಮಂತ್ರಾಲಯ ಕ್ಷೇತ್ರಕ್ಕೆ ದರ್ಶನ ಅವಕಾಶವಿಲ್ಲ ಎಂದು ಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ತಿಳಿಸಿದ್ದಾರೆ.

ಆದರೆ, ಮಠದಲ್ಲಿ ಪೂಜಾ ಕೈಂಕರ್ಯಗಳು ಎಂದಿನಂತೆ ನಡೆಯುತ್ತವೆ. ಪಂಚಾಮೃತ, ರಥೋತ್ಸವ ಸೇವೆಗಳಿರುತ್ತವೆ. ಭಕ್ತರು ಆನ್‌ಲೈನ್‌ ಮೂಲಕ ಸೇವೆಗಳಲ್ಲಿ ಪಾಲ್ಗೊಂಡು ಕೃತಾರ್ಥರಾಬಹುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT