<p><strong>ರಾಯಚೂರು:</strong> ರಾಜ್ಯ ಮತ್ತು ಕೇಂದ್ರ ಸರ್ಕಾರ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿರುವ ತೊಂದರೆಗಳನ್ನು ಕೂಡಲೇ ನಿವಾರಣೆ ಮಾಡಿಕೊಂಡು, ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಜಿಲ್ಲೆಗೆ ಮಂಜೂರಾದ ವಸತಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಶೀಘ್ರ ಅನುಷ್ಠಾನ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.</p>.<p>ಹಲವು ವರ್ಷಗಳಾದರೂ ಫಲಾನುಭವಿಗಳನ್ನು ಆಯ್ಕೆ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು,</p>.<p>ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವುದಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ರಾಯಚೂರು ಮತ್ತು ಸಿಂಧನೂರು ನಗರಗಳಲ್ಲಿ ರಾಜೀವಗಾಂಧಿ ವಸತಿ ಯೋಜನೆಯಡಿ ಅನುಷ್ಠಾನ ಮಾಡುತ್ತಿರುವ ಕಾಮಗಾರಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿದರು. ಆನಂತರ ನಾಲ್ಕು ಪುರಸಭೆ ಮತ್ತು ಐದು ಪಟ್ಟಣ ಪಂಚಾಯ್ತಿಗಳಡಿ ಪ್ರಗತಿಯಲ್ಲಿರುವ ವಸತಿ ಯೋಜನೆಗಳ ಬಗ್ಗೆ ಅಂಕಿ–ಅಂಶ ಮಾಹಿತಿ ಪಡೆದರು.</p>.<p>ರಾಜೀವಗಾಂಧಿ ವಸತಿ ಯೋಜನೆಯಡಿ 2015ರಿಂದ 2018ರವರೆಗೆ ಜಿಲ್ಲೆಗೆ 8,976 ಮನೆಗಳು ಮಂಜೂರಾಗಿದ್ದು, 6,310 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. 2,913 ಮನೆಗಳು ಮಾತ್ರ ನಿರ್ಮಾಣಗೊಂಡಿವೆ. 1,661 ಮನೆಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.</p>.<p>ವಾಜಪೇಯಿ ವಸತಿ ಯೋಜನೆಯಡಿ 2017–18ನೇ ಸಾಲಿನಲ್ಲಿ 750 ಮನೆಗಳು ಮಂಜೂರಾದರೆ 150 ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಅಂಬೇಡ್ಕರ್ ವಸತಿ ಯೋಜನೆಯಡಿ 2017–18ರಲ್ಲಿ 1,386 ಮನೆಗಳು ಮಂಜೂರಾಗಿದ್ದು, 291 ಫಲಾನುಭವಿಗಳನ್ನು ಆಯ್ಕೆಗೊಳಿಸಲಾಗಿದೆ. ಹೀಗಾದರೆ ಪ್ರಗತಿ ಸಾಧಿವುಸುದು ಹೇಗೆ ಎಂದು ಪ್ರಶ್ನಿಸಿದರು.</p>.<p>ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 4,500 ಮನೆಗಳು ಮಂಜೂರಾಗಿವೆ. ತ್ವರಿತವಾಗಿ ಫಲಾನುಭವಿಗಳನ್ನು ಆಯ್ಕೆಗೊಳಿಸಿ, ಯೋಜನೆ ಅನುಷ್ಠಾನಕ್ಕಿರುವ ತೊಂದರೆಗಳನ್ನು ಬಗೆಹರಿಸಿಕೊಂಡು ಪ್ರಗತಿ ಸಾಧಿಸಬೇಕು. ನಗರಾಭಿವೃದ್ಧಿ ಕೋಶದ ಅಧಿಕಾರಿ ಪ್ರಗತಿಯ ಮೇಲುಸ್ತುವಾರಿ ಮಾಡಬೇಕು ಎಂದರು.</p>.<p>2015–16ನೇ ಸಾಲಿನಲ್ಲಿ 1,800 ಮನೆಗಳಿಗೆ ಮಂಜೂರಿಯಾಗಿದ್ದರೂ 1,789 ಫಲಾನುಭವಿಗಳನ್ನು ಆಯ್ಕೆ ಮಾಡಿರುವುದು ಒಳ್ಳೆಯ ವಿಚಾರ. ಆದರೆ, 990 ಮನೆಗಳು ಮಾತ್ರ ಪೂರ್ಣಗೊಂಡಿರುವುದು ಸೋಜಿಗದ ಸಂಗತಿ. ಯೋಜನೆ ಅನುಷ್ಠಾನ ಹಂತದಲ್ಲಿ ಎದುರಾಗುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವ ಕೆಲಸ ಮಾಡಬೇಕಿತ್ತು ಎಂದು ಹೇಳಿದರು.</p>.<p>ಡಾ.ಬಿ.ಆರ್. ಅಂಬೇಡ್ಕರ್ ನಿವಾಸ ನಗರ ವಸತಿ ಯೋಜನೆಯಡಿ 2015–16ನೇ ಸಾಲಿನಲ್ಲಿ 1,155 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಈ ಯೋಜನೆಯಲ್ಲೂ ಕೇವಲ 565 ಮನೆಗಳು ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಹೌಸಿಂಗ್ ಫಾರ್ ಆಲ್ ಯೋಜನೆಯಡಿ 508 ಫಲಾನುಭವಿಗಳಿಗೆ ಸಾಲ ಮಂಜೂರಾತಿಯಾಗಿದ್ದು, ಶೇ 13.97 ರಷ್ಟು ಸಹಾಯಧನ ಪಾವತಿಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಜ್ಯ ಮತ್ತು ಕೇಂದ್ರ ಸರ್ಕಾರ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿರುವ ತೊಂದರೆಗಳನ್ನು ಕೂಡಲೇ ನಿವಾರಣೆ ಮಾಡಿಕೊಂಡು, ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಜಿಲ್ಲೆಗೆ ಮಂಜೂರಾದ ವಸತಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಶೀಘ್ರ ಅನುಷ್ಠಾನ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.</p>.<p>ಹಲವು ವರ್ಷಗಳಾದರೂ ಫಲಾನುಭವಿಗಳನ್ನು ಆಯ್ಕೆ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು,</p>.<p>ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವುದಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ರಾಯಚೂರು ಮತ್ತು ಸಿಂಧನೂರು ನಗರಗಳಲ್ಲಿ ರಾಜೀವಗಾಂಧಿ ವಸತಿ ಯೋಜನೆಯಡಿ ಅನುಷ್ಠಾನ ಮಾಡುತ್ತಿರುವ ಕಾಮಗಾರಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿದರು. ಆನಂತರ ನಾಲ್ಕು ಪುರಸಭೆ ಮತ್ತು ಐದು ಪಟ್ಟಣ ಪಂಚಾಯ್ತಿಗಳಡಿ ಪ್ರಗತಿಯಲ್ಲಿರುವ ವಸತಿ ಯೋಜನೆಗಳ ಬಗ್ಗೆ ಅಂಕಿ–ಅಂಶ ಮಾಹಿತಿ ಪಡೆದರು.</p>.<p>ರಾಜೀವಗಾಂಧಿ ವಸತಿ ಯೋಜನೆಯಡಿ 2015ರಿಂದ 2018ರವರೆಗೆ ಜಿಲ್ಲೆಗೆ 8,976 ಮನೆಗಳು ಮಂಜೂರಾಗಿದ್ದು, 6,310 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. 2,913 ಮನೆಗಳು ಮಾತ್ರ ನಿರ್ಮಾಣಗೊಂಡಿವೆ. 1,661 ಮನೆಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.</p>.<p>ವಾಜಪೇಯಿ ವಸತಿ ಯೋಜನೆಯಡಿ 2017–18ನೇ ಸಾಲಿನಲ್ಲಿ 750 ಮನೆಗಳು ಮಂಜೂರಾದರೆ 150 ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಅಂಬೇಡ್ಕರ್ ವಸತಿ ಯೋಜನೆಯಡಿ 2017–18ರಲ್ಲಿ 1,386 ಮನೆಗಳು ಮಂಜೂರಾಗಿದ್ದು, 291 ಫಲಾನುಭವಿಗಳನ್ನು ಆಯ್ಕೆಗೊಳಿಸಲಾಗಿದೆ. ಹೀಗಾದರೆ ಪ್ರಗತಿ ಸಾಧಿವುಸುದು ಹೇಗೆ ಎಂದು ಪ್ರಶ್ನಿಸಿದರು.</p>.<p>ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 4,500 ಮನೆಗಳು ಮಂಜೂರಾಗಿವೆ. ತ್ವರಿತವಾಗಿ ಫಲಾನುಭವಿಗಳನ್ನು ಆಯ್ಕೆಗೊಳಿಸಿ, ಯೋಜನೆ ಅನುಷ್ಠಾನಕ್ಕಿರುವ ತೊಂದರೆಗಳನ್ನು ಬಗೆಹರಿಸಿಕೊಂಡು ಪ್ರಗತಿ ಸಾಧಿಸಬೇಕು. ನಗರಾಭಿವೃದ್ಧಿ ಕೋಶದ ಅಧಿಕಾರಿ ಪ್ರಗತಿಯ ಮೇಲುಸ್ತುವಾರಿ ಮಾಡಬೇಕು ಎಂದರು.</p>.<p>2015–16ನೇ ಸಾಲಿನಲ್ಲಿ 1,800 ಮನೆಗಳಿಗೆ ಮಂಜೂರಿಯಾಗಿದ್ದರೂ 1,789 ಫಲಾನುಭವಿಗಳನ್ನು ಆಯ್ಕೆ ಮಾಡಿರುವುದು ಒಳ್ಳೆಯ ವಿಚಾರ. ಆದರೆ, 990 ಮನೆಗಳು ಮಾತ್ರ ಪೂರ್ಣಗೊಂಡಿರುವುದು ಸೋಜಿಗದ ಸಂಗತಿ. ಯೋಜನೆ ಅನುಷ್ಠಾನ ಹಂತದಲ್ಲಿ ಎದುರಾಗುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವ ಕೆಲಸ ಮಾಡಬೇಕಿತ್ತು ಎಂದು ಹೇಳಿದರು.</p>.<p>ಡಾ.ಬಿ.ಆರ್. ಅಂಬೇಡ್ಕರ್ ನಿವಾಸ ನಗರ ವಸತಿ ಯೋಜನೆಯಡಿ 2015–16ನೇ ಸಾಲಿನಲ್ಲಿ 1,155 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಈ ಯೋಜನೆಯಲ್ಲೂ ಕೇವಲ 565 ಮನೆಗಳು ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಹೌಸಿಂಗ್ ಫಾರ್ ಆಲ್ ಯೋಜನೆಯಡಿ 508 ಫಲಾನುಭವಿಗಳಿಗೆ ಸಾಲ ಮಂಜೂರಾತಿಯಾಗಿದ್ದು, ಶೇ 13.97 ರಷ್ಟು ಸಹಾಯಧನ ಪಾವತಿಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>