<p><strong>ರಾಯಚೂರು:</strong>ಕೌಟುಂಬಿಕ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ದೌರ್ಜನ್ಯಕ್ಕೊಳಗಾದ ಮಹಿಳೆಗೆ ಶೀಘ್ರ ಪರಿಹಾರ ಬಿಡುಗಡೆ ಮಾಡುವುದಕ್ಕೆ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ₹25 ಸಾವಿರ ಪರಿಹಾರ ನೀಡಬೇಕು. ಒಂದು ವೇಳೆ ಇಂಥ ಘಟನೆಯಲ್ಲಿ ಮೃತಪಟ್ಟಿದ್ದರೆ ಅಂಥವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ನೀಡಬೇಕು. ಆ್ಯಸಿಡ್ ದಾಳಿ ನಡೆದಿರುವ ಪ್ರಕರಣಗಳಲ್ಲಿ ಮಹಿಳೆಗೆ ₹3 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ‘ಸ್ಥೈರ್ಯ’ ಹೆಸರಿನ ಯೋಜನೆ ಇದ್ದು, ಅದರಡಿ ಸಕಾಲಕ್ಕೆ ಪರಿಹಾರ ತಲುಪಿಸುವ ಕಾರ್ಯ ನಡೆಸಬೇಕು ಎಂದರು.</p>.<p>ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ನೊಂದವರಿಗೆ ಕೂಡಲೇ ನೆರವಾಗಬೇಕು. ನೋವಿಗೆ ಸ್ಪಂದಿಸಿ ಪರಿಹಾರ ಒದಗಿಸಬೇಕು. ಪ್ರಕರಣಗಳು ನಡೆದಿರುವುದು ಗೊತ್ತಾದರೆ, ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೀರನಗೌಡ ಮಾತನಾಡಿ, ಏಪ್ರಿಲ್ನಲ್ಲಿ 53 ಪ್ರಕರಣಗಳು ದಾಖಲಾಗಿದ್ದವು. ಇಲ್ಲಿಯವರೆಗೂ ಒಟ್ಟು 75 ಪ್ರಕರಣಗಳಾಗಿವೆ. ಪರಿಹಾರ ಧನ ಸರ್ಕಾರದಿಂದ ಒಟ್ಟು ₹10.26 ಕೋಟಿ ಬಿಡುಗಡೆಯಾಗಿತ್ತು. ಸದ್ಯ 18 ಪ್ರಕರಣಗಳು ನ್ಯಾಯಾಲಯದಲ್ಲಿವೆ. ರಾಯಚೂರು ತಾಲ್ಲೂಕಿನಲ್ಲಿ ಅತಿಹೆಚ್ಚು 31 ಪ್ರಕರಣಗಳಾಗಿವೆ ಎಂದರು.</p>.<p>ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಮಾತನಾಡಿ, ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ನ್ಯಾ. ಎಂ.ಸಿ.ನಾಡಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ದೇವದಾಸಿ ಮಹಿಳೆಯರ ಪುನರ್ವಸತಿ ಅಧಿಕಾರಿ ಗೋಪಾಲನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ಕೌಟುಂಬಿಕ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ದೌರ್ಜನ್ಯಕ್ಕೊಳಗಾದ ಮಹಿಳೆಗೆ ಶೀಘ್ರ ಪರಿಹಾರ ಬಿಡುಗಡೆ ಮಾಡುವುದಕ್ಕೆ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ₹25 ಸಾವಿರ ಪರಿಹಾರ ನೀಡಬೇಕು. ಒಂದು ವೇಳೆ ಇಂಥ ಘಟನೆಯಲ್ಲಿ ಮೃತಪಟ್ಟಿದ್ದರೆ ಅಂಥವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ನೀಡಬೇಕು. ಆ್ಯಸಿಡ್ ದಾಳಿ ನಡೆದಿರುವ ಪ್ರಕರಣಗಳಲ್ಲಿ ಮಹಿಳೆಗೆ ₹3 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ‘ಸ್ಥೈರ್ಯ’ ಹೆಸರಿನ ಯೋಜನೆ ಇದ್ದು, ಅದರಡಿ ಸಕಾಲಕ್ಕೆ ಪರಿಹಾರ ತಲುಪಿಸುವ ಕಾರ್ಯ ನಡೆಸಬೇಕು ಎಂದರು.</p>.<p>ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ನೊಂದವರಿಗೆ ಕೂಡಲೇ ನೆರವಾಗಬೇಕು. ನೋವಿಗೆ ಸ್ಪಂದಿಸಿ ಪರಿಹಾರ ಒದಗಿಸಬೇಕು. ಪ್ರಕರಣಗಳು ನಡೆದಿರುವುದು ಗೊತ್ತಾದರೆ, ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೀರನಗೌಡ ಮಾತನಾಡಿ, ಏಪ್ರಿಲ್ನಲ್ಲಿ 53 ಪ್ರಕರಣಗಳು ದಾಖಲಾಗಿದ್ದವು. ಇಲ್ಲಿಯವರೆಗೂ ಒಟ್ಟು 75 ಪ್ರಕರಣಗಳಾಗಿವೆ. ಪರಿಹಾರ ಧನ ಸರ್ಕಾರದಿಂದ ಒಟ್ಟು ₹10.26 ಕೋಟಿ ಬಿಡುಗಡೆಯಾಗಿತ್ತು. ಸದ್ಯ 18 ಪ್ರಕರಣಗಳು ನ್ಯಾಯಾಲಯದಲ್ಲಿವೆ. ರಾಯಚೂರು ತಾಲ್ಲೂಕಿನಲ್ಲಿ ಅತಿಹೆಚ್ಚು 31 ಪ್ರಕರಣಗಳಾಗಿವೆ ಎಂದರು.</p>.<p>ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಮಾತನಾಡಿ, ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ನ್ಯಾ. ಎಂ.ಸಿ.ನಾಡಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ದೇವದಾಸಿ ಮಹಿಳೆಯರ ಪುನರ್ವಸತಿ ಅಧಿಕಾರಿ ಗೋಪಾಲನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>