ಚಂದ್ರಮೌಳೇಶ್ವರ ವೃತ್ತ, ಮಹಾವೀರ ವೃತ್ತದ ಮಾರ್ಗಗಳಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ, ಅಲ್ಲಿ ಕೆಲವು ಮಳಿಗೆಗಳು ತೆರೆದುಕೊಂಡಿದ್ದವು. ಕೂಡಲೇ ಸ್ಥಗಿತ ಮಾಡುವುದಕ್ಕೆ ಸೂಚನೆ ನೀಡಿದರಲ್ಲದೆ, ವ್ಯಾಪಾರ ಆರಂಭಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಿನ್ ಕಂದಿಲ್ ವೃತ್ತದಲ್ಲಿ ಬಹುತೇಕ ಅಂಗಡಿಗಳು ತೆರೆದುಕೊಂಡಿದ್ದವು. ಔಷಧಿ ಅಂಗಡಿ, ತರಕಾರಿ ಅಂಗಡಿ, ಕುಡಿಯುವ ನೀರಿನ ಘಟಕಗಳು, ಪೆಟ್ರೊಲ್ ಪಂಪ್ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಎನ್ನುಳಿದ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸುವಂತೆ ನಗರಸಭೆ ಸಿಬ್ಬಂದಿಗೆ ಸೂಚಿಸಿದರು.