ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಆದ್ಯತಾ ವಲಯದವರಿಗೆ ಲಸಿಕೆ ನೀಡಲು ಸಿದ್ಧತೆ

ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ಸಭೆ
Last Updated 3 ಜೂನ್ 2021, 0:27 IST
ಅಕ್ಷರ ಗಾತ್ರ

ರಾಯಚೂರು: ಪ್ರಸ್ತುತ ಕೋವಿಡ್ ಲಸಿಕೆ ನೀಡಲು ಗುರುತಿಸಲಾಗಿರುವ ಆದ್ಯತಾ ವಲಯದ ಗುಂಪಿನ 18 ರಿಂದ 44 ವರ್ಷದೊಳಗಿನ ಫಲಾನುಭವಿಗಳಿಗೆ ಆಂದೋಲನದ ಮಾದರಿಯಲ್ಲಿ ಚುಚ್ಚುಮದ್ದು ನೀಡಲು ಕೂಡಲೇ ಪಟ್ಟಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗ ಗುರುತಿಸಲಾಗಿರುವ ಆದ್ಯತಾ ವಲಯದ ಗುಂಪಿನವರು, ವಿವಿಧ ರೀತಿಯ ವ್ಯವಹಾರಗಳ ಸಂದರ್ಭಗಳಲ್ಲಿ ಜನ ಸಾಮಾನ್ಯರೊಂದಿಗೆ ನೇರ ಸಂಪರ್ಕಕ್ಕೆ ಬರುತ್ತಾರೆ. ಅವರೊಂದಿಗೆ ವ್ಯವಹರಿಸುವ ಸಮಯದಲ್ಲಿ ಕೋವಿಡ್ ಹರಡುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಹಾಗಾಗಿ ಸರ್ಕಾರ ಅವರೆಲ್ಲರಿಗೂ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೀಡುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದರು.

ಇದಕ್ಕಾಗಿ ಲಸಿಕೆಗಳನ್ನು ಪೂರೈಸುತ್ತಿದೆ. ಜಿಲ್ಲೆಗೆ 10 ಸಾವಿರ ವೈಲ್ಸ್ ಬಂದಿದ್ದು, ಕೂಡಲೇ ವಿಕಲಚೇತನ, ಆಹಾರ ಮತ್ತು ನಾಗರೀಕ ಪೂರೈಕೆ, ಕೃಷಿ, ತೋಟಗಾರಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಬ್ಯಾಂಕುಗಳು, ಸಾರಿಗೆ, ಜೆಸ್ಕಾಂ, ಕಾರ್ಮಿಕ ಇಲಾಖೆ, ಕಟ್ಟಡ ನಿರ್ಮಾಣ ಕಾರ್ಯ ನಿರ್ವಹಿಸುವವರು, ಕಿರಾಣಿ ಅಂಗಡಿ ಕೆಲಸಗಾರರು, ಅದರ ಮಾಲೀಕರು ಸೇರಿದಂತೆ ನೇರವಾಗಿ ಸಾರ್ವಜನಿಕರ ಸಂಪರ್ಕಕ್ಕೆ ಬರುವರರ ಪಟ್ಟಿಯನ್ನು ಕೂಡಲೇ ಒದಗಿಸಬೇಕು ಎಂದರು.

ಬಾರ್ ಅಸೋಸಿಯೇಷನ್ ಸದಸ್ಯರು, ಹಮಾಲರು, ಹಾಲು ಸಹಕಾರ ಸಂಘಗಳ ಸಿಬ್ಬಂದಿ, ಪ್ರಾಥಮಿಕ ಕೃಷಿ ಸಹಕಾರ
ಸೊಸೈಟಿಗಳು, ಕೇಬಲ್ ಆಪರೇಟರ್‌ಗಳು, ಬಿಎಸ್‌ಎನ್‌ಎಲ್ ಸೇರಿದಂತೆ ಎಲ್ಲಾ ಖಾಸಗಿ ಟೆಲಿಕಾಂ ಸಿಬ್ಬಂದಿ, ಇಂಟರ್‌ನೆಟ್ ಸೇವಾದಾರರು, ಆಟೋ ಡ್ರೆವರ್‌ಗಳು ಸೇರಿದಂತೆ ಆದ್ಯತಾ ವಲಯಕ್ಕೆ ಬರುವವರ ಪಟ್ಟಿ ಒದಗಿಸಿ, ಅದರಂತೆ ಅವರೆಲ್ಲರಿಗೂ ಲಸಿಕೆ ಕೊಡಿಸಬೇಕು ಎಂದು ಹೇಳಿದರು.

ಸಾಧ್ಯವಾದಷ್ಟು ಜನರನ್ನು ಒಗ್ಗೂಡಿಸಿಕೊಂಡು ನಗರ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆ ಅಥವಾ ದೊಡ್ಡ ಸಮುದಾಯ ಭವನಗಳು ಅಥವಾ ದೊಡ್ಡ ಶಾಲೆ, ಕಾಲೇಜುಗಳಲ್ಲಿ ಆರ್‌ಸಿಎಚ್ ಅಧಿಕಾರಿಗಳ ಸಮನ್ವಯದೊಂದಿಗೆ ಅವರಿಗೆ ಲಸಿಕೆ ಕೊಡಿಸಬೇಕು ಎಂದು ಸೂಚಿಸಿದರು.

ಮೊದಲಿಗೆ ಇವರೆಲ್ಲರಿಗೂ ಕೋವಿಡ್ ಲಸಿಕೆ ಕೊಡಿಸಿದ್ದಲ್ಲೀ ಸೋಂಕಿನ ಸರಪಳಿಯನ್ನು ತುಂಡರಿಸಬಹುದು, ಇಲ್ಲದಿದ್ದಲ್ಲೀ ಇವರು ಸಾರ್ವಜನಿಕರೊಂದಿಗೆ ವ್ಯವಹರಿಸುವಾಗ ಮುಟ್ಟುವುದು ಅಥವಾ ಹಣ ನೀಡುವಾಗ ಮತ್ತು ಪಡೆಯುವ ಸಂದರ್ಭಗಳಲ್ಲಿ ಸೋಂಕು ಹರಡಬಹುದು. ಆದ ಕಾರಣ ಈ ಆದ್ಯತಾ ವಲಯದವರಿಗೆ ಕೂಡಲೇ ವ್ಯಾಕ್ಸಿನ್ ಕೊಡಿಸಬೇಕು. ಏನೇ ಸಮಸ್ಯೆಗಳಿದ್ದರೂ ನೋಡಲ್ ಅಧಿಕಾರಿಯಾದ ಎಡಿಸಿ ದುರುಗೇಶ್ ಹಾಗೂ ಆರ್‌ಸಿಎಚ್ ಅಧಿಕಾರಿ ಡಾ. ವಿಜಯ ಅವರನ್ನು ಸಂಪರ್ಕಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಆರ್‌ಸಿಎಚ್ ಅಧಿಕಾರಿ ಡಾ. ವಿಜಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಲ್ಲಿಕಾರ್ಜುನ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮೊಹಮ್ಮದ ಅಲಿ, ಆಹಾರ ಮತ್ತು ನಾಗರೀಕರ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಅರುಣ್ ಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬು ಬಳಗಾನೂರು, ಡಿಡಿಪಿಯು, ಡಿಡಿಪಿಐ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT