<p><strong>ರಾಯಚೂರು: </strong>ಜಿಲ್ಲೆಯಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರ ದಾಖಲೆಗಳನ್ನು ಜಾಗೃತಿಯಿಂದ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಭೂಮಿ ಮತ್ತು ವಸತಿ ರಹಿತರಿಗೆ ಪಟ್ಟಾ ಹಾಗೂ ಹಕ್ಕುಪತ್ರ ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸರ್ಕಾರಿ ಜಮೀನುಗಳಲ್ಲಿ ಇರುವವರಿಗೆ ಪಟ್ಟಾ ನೀಡುವುದಕ್ಕೆ ದಾಖಲೆಗಳನ್ನು ಪರಿಶೀಲಿಸುವಾಗ ಅಧಿಕಾರಿಗಳು ಸೂಕ್ಷ್ಮವಾಗಿರಬೇಕು. ಯಾವುದೇ ತಪ್ಪುಗಳು ಆಗದಂತೆ ಪರಿಶೀಲನೆ ಕೈಗೊಂಡು ಹಕ್ಕುಪತ್ರ ಸಿದ್ಧಪಡಿಸಬೇಕಾಗುತ್ತದೆ ಎಂದು ಹೇಳಿದರು.</p>.<p>ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ವಸತಿ ಉದ್ದೇಶ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿನ ಖಾತಾ ದಾಖಲಾತಿಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖಾತಾ ಹೊಂದಿರದ ಜಮೀನುಗಳಿಗೆ ಪಟ್ಟಾ ನೀಡುವಂತಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.</p>.<p>ಜಿಲ್ಲೆಯಲ್ಲಿ ಗೋಮಾಳ, ಪರಂಪೋಕು, ಇನಾಂ, ಅರಣ್ಯ ಮತ್ತಿತರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿದ್ದಾರೆ, ನಿವೇಶನ ರಹಿತರಿದ್ದಾರೆ. ಇಂಥವರ ಅರ್ಜಿಗಳನ್ನು ಕೂಲಂಕಷ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲೆಯಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರ ದಾಖಲೆಗಳನ್ನು ಜಾಗೃತಿಯಿಂದ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಭೂಮಿ ಮತ್ತು ವಸತಿ ರಹಿತರಿಗೆ ಪಟ್ಟಾ ಹಾಗೂ ಹಕ್ಕುಪತ್ರ ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸರ್ಕಾರಿ ಜಮೀನುಗಳಲ್ಲಿ ಇರುವವರಿಗೆ ಪಟ್ಟಾ ನೀಡುವುದಕ್ಕೆ ದಾಖಲೆಗಳನ್ನು ಪರಿಶೀಲಿಸುವಾಗ ಅಧಿಕಾರಿಗಳು ಸೂಕ್ಷ್ಮವಾಗಿರಬೇಕು. ಯಾವುದೇ ತಪ್ಪುಗಳು ಆಗದಂತೆ ಪರಿಶೀಲನೆ ಕೈಗೊಂಡು ಹಕ್ಕುಪತ್ರ ಸಿದ್ಧಪಡಿಸಬೇಕಾಗುತ್ತದೆ ಎಂದು ಹೇಳಿದರು.</p>.<p>ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ವಸತಿ ಉದ್ದೇಶ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿನ ಖಾತಾ ದಾಖಲಾತಿಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖಾತಾ ಹೊಂದಿರದ ಜಮೀನುಗಳಿಗೆ ಪಟ್ಟಾ ನೀಡುವಂತಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.</p>.<p>ಜಿಲ್ಲೆಯಲ್ಲಿ ಗೋಮಾಳ, ಪರಂಪೋಕು, ಇನಾಂ, ಅರಣ್ಯ ಮತ್ತಿತರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿದ್ದಾರೆ, ನಿವೇಶನ ರಹಿತರಿದ್ದಾರೆ. ಇಂಥವರ ಅರ್ಜಿಗಳನ್ನು ಕೂಲಂಕಷ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>