<p><strong>ರಾಯಚೂರು</strong>: ಭೂ ಒಡೆತನ ಯೋಜನೆಗೆ ಸಂಬಂಧಿಸಿದ ಬಾಕಿ ಪ್ರಕರಣಗಳನ್ನು ಕೂಡಲೇ ವಿಲೇವಾರಿಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜಮೀನು ಖರೀದಿಗಾಗಿ ಪರಿಷ್ಕೃತ ದರದನ್ವಯ ಪ್ರಕ್ರಿಯೆ ನಡೆಯುತ್ತಿದೆಯೋ ಇಲ್ಲವೋ ಎಂಬುದರ ಮೇಲೆ ನಿಗಾ ವಹಿಸಬೇಕು. ನಿಗಮಗಳಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಅತಿ ಶೀಘ್ರ ಇತ್ಯರ್ಥ ಮಾಡುವುದಕ್ಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.</p>.<p>ನಿಗಮಗಳ ಮುಖ್ಯಸ್ಥರು ಜಮೀನುಗಳನ್ನು ಪರಿಶೀಲಿಸಿದಿ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು.</p>.<p>ಸರ್ಕಾರದಿಂದ ಕೊಡುವ ಹಣವು ಜಮೀನಿನ ಮಾಲೀಕರಿಗೆ ಮುಟ್ಟುವಂತೆ ಎಚ್ಚರಿಕೆ ವಹಿಸುವುದು ಕೂಡಾ ಅಧಿಕಾರಿಗಳ ಕೆಲಸ ಎಂದು ಹೇಳಿದರು.</p>.<p>ಈ ಯೋಜನೆ ಫಲಾನುಭವಿಗಳಿಗೆ ಸಮರ್ಪಕವಾಗಿ ಭೂಮಿ ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಿಕೊಳ್ಳಬೇಕು. ಮೂರನೇ ವ್ಯಕ್ತಿಗಳಿಂದ ಮೋಸವಾಗುವುದನ್ನು ತಪ್ಪಿಸಬೇಕು ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಶ್ರೀಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಭೂ ಒಡೆತನ ಯೋಜನೆಗೆ ಸಂಬಂಧಿಸಿದ ಬಾಕಿ ಪ್ರಕರಣಗಳನ್ನು ಕೂಡಲೇ ವಿಲೇವಾರಿಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜಮೀನು ಖರೀದಿಗಾಗಿ ಪರಿಷ್ಕೃತ ದರದನ್ವಯ ಪ್ರಕ್ರಿಯೆ ನಡೆಯುತ್ತಿದೆಯೋ ಇಲ್ಲವೋ ಎಂಬುದರ ಮೇಲೆ ನಿಗಾ ವಹಿಸಬೇಕು. ನಿಗಮಗಳಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಅತಿ ಶೀಘ್ರ ಇತ್ಯರ್ಥ ಮಾಡುವುದಕ್ಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.</p>.<p>ನಿಗಮಗಳ ಮುಖ್ಯಸ್ಥರು ಜಮೀನುಗಳನ್ನು ಪರಿಶೀಲಿಸಿದಿ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು.</p>.<p>ಸರ್ಕಾರದಿಂದ ಕೊಡುವ ಹಣವು ಜಮೀನಿನ ಮಾಲೀಕರಿಗೆ ಮುಟ್ಟುವಂತೆ ಎಚ್ಚರಿಕೆ ವಹಿಸುವುದು ಕೂಡಾ ಅಧಿಕಾರಿಗಳ ಕೆಲಸ ಎಂದು ಹೇಳಿದರು.</p>.<p>ಈ ಯೋಜನೆ ಫಲಾನುಭವಿಗಳಿಗೆ ಸಮರ್ಪಕವಾಗಿ ಭೂಮಿ ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಿಕೊಳ್ಳಬೇಕು. ಮೂರನೇ ವ್ಯಕ್ತಿಗಳಿಂದ ಮೋಸವಾಗುವುದನ್ನು ತಪ್ಪಿಸಬೇಕು ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಶ್ರೀಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>