ವಿವಿಧ ಇಲಾಖೆ ಅಧಿಕಾರಿಗಳಿಗೆ ಹಾಗೂ ಮರಳು ಗಣಿಗಾರಿಕೆ ಪರವಾನಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 21 ಮರಳು ಬ್ಲಾಕ್ಗಳನ್ನು ಗುರುತಿಸಲಾಗಿದ್ದು, ಮರಳು ಗಣಿಗಾರಿಕೆ ಮತ್ತು ಮರಳು ದಾಸ್ತಾನು, ಮರಳು ಸಾಗಣಿಕೆ ಬಗ್ಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಮರಳು ದಾಸ್ತಾನಿಗೆ ಬಳಕೆಮಾಡುವ ಭೂಮಿಯನ್ನು ಕೃಷಿಯೇತರ ಭೂಮಿ ಎಂದು ಪರಿವರ್ತಿಸಿಕೊಳ್ಳಬೇಕು. ಮರಳು ದಾಸ್ತಾನು ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಮರಳುಗಣಿಗಾರಿಕೆ ಪರವಾನಿಗೆದಾರರು ಮರಳು ಸಾಗಾಣಿಕೆಯ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಕೆ ಮಾಡಿಕೊಳ್ಳಬೇಕು ಎಂದರು.