ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಶೌಚಾಲಯ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಟ್ಟಡಗಳಿಗೆ ಉಚಿತ ನೀರಿನ ಸಂಪರ್ಕ ಕಲ್ಪಿಸಲಾಗುವುದು. ನೀರಿನ ಸೌಲಭ್ಯ ಇಲ್ಲದ ಶಾಲಾ ಅಂಗನವಾಡಿ ಕೇಂದ್ರ ಸೇರಿದಂತೆ ಸರ್ಕಾರಿ ಕಟ್ಟಡದ ಮುಖ್ಯಸ್ಥರು ತಾಲ್ಲೂಕು ಪಂಚಾಯಿತಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಪರ್ಕ ಕಲ್ಪಿಸಿಕೊಳ್ಳಲು ತಿಳಿಸಿದರು.