<p><strong>ರಾಯಚೂರು</strong>: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ನಗರದ ರಿಮ್ಸ್, ಒಪೆಕ್ ಹಾಗೂ ನವೋದಯ ಆಸ್ಪತ್ರೆಗಳಿಗೆ ಮೇಲ್ವಿಚಾರಣೆ ಮಾಡಲು ರಚಿಸಿರುವ ಜಿಲ್ಲಾ ಮಟ್ಟದ ಸಮಿತಿಯು ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿತು. ಹಲವು ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ತಾಕೀತು ಮಾಡಲಾಯಿತು.</p>.<p>ಸಮಿತಿಯ ಅಧ್ಯಕ್ಷ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ನೇತೃತ್ವದ ತಂಡವು, ಮೊದಲಿಗೆರಿಮ್ಸ್ಗೆ ಭೇಟಿ ನೀಡಿ, ಅಲ್ಲಿರುವ ಆಕ್ಸಿಜನ್ ಪೂರೈಕೆಯ ಯಂತ್ರಗಳು, ಕೋವಿಡ್ಗೆ ಚಿಕಿತ್ಸೆ ನೀಡಲು ನೂತನವಾಗಿ ನಿರ್ಮಿಸಲಾಗುತ್ತಿರುವ ಎರಡು ಕೊಠಡಿಗಳು, ಪ್ರಯೋಗಾಲಯಗಳನ್ನು ಪರಿಶೀಲಿಸಿದರು.</p>.<p>ನವೋದಯದಲ್ಲಿ 27 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೂವರೆಗೆ 77 ಸೋಂಕಿತರು ಚಿಕಿತ್ಸೆಪಡೆದಿದ್ದು, 2 ಸಾವುಗಳು ಸಂಭವಿಸಿವೆ ಎಂದು ನವೋದಯದ ಆಸ್ಪತ್ರೆಯ ಮೆಡಿಕಲ್ ಅಧೀಕ್ಷಕ ಅಶೋಕ್ ಮಹೇಂದ್ರಕರ್ ಮಾಹಿತಿ ನೀಡಿದರು.</p>.<p>ಕೋವಿಡ್ಗೆ ಚಿಕಿತ್ಸೆ ನೀಡಲು ಮುಂದೆ ಬಂದಿರುವ ನೀಯೋ ಫಾರ್ಚುನ್, ಲಕ್ಷ್ಮೀ ನಾರಾಯಣ, ಭಂಡಾರಿ ಸೇರಿದಂತೆ ಕೆಲವು ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿಗಳು ಹಾಗೂ ಅಲ್ಲಿ ಚಿಕಿತ್ಸೆ ನೀಡುತ್ತಿರುವ ಕ್ರಮಗಳ ಬಗ್ಗೆ ಮುಂಬರುವ ದಿನಗಳಲ್ಲಿ<br />ಪರಿಶೀಲಿಸಲಾಗುವುದು ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರಿಮ್ಸ್ ಡೀನ್ ಡಾ. ಬಸವರಾಜ ಪೀರಾಪುರ್, ನವೋದಯ ಆಸ್ಪತ್ರೆಯ ಡೀನ್ ಡಾ. ವಿಜಯಚಂದ್ರ, ಮೆಡಿಸಿನ್ ಮುಖ್ಯಸ್ಥ ಡಾ. ಶಂಕರಪ್ಪ, ಅನಸ್ತೇಷಿಯಾ ಮುಖ್ಯಸ್ಥ ಡಾ. ಬಾಲ ರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ನಗರದ ರಿಮ್ಸ್, ಒಪೆಕ್ ಹಾಗೂ ನವೋದಯ ಆಸ್ಪತ್ರೆಗಳಿಗೆ ಮೇಲ್ವಿಚಾರಣೆ ಮಾಡಲು ರಚಿಸಿರುವ ಜಿಲ್ಲಾ ಮಟ್ಟದ ಸಮಿತಿಯು ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿತು. ಹಲವು ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ತಾಕೀತು ಮಾಡಲಾಯಿತು.</p>.<p>ಸಮಿತಿಯ ಅಧ್ಯಕ್ಷ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ನೇತೃತ್ವದ ತಂಡವು, ಮೊದಲಿಗೆರಿಮ್ಸ್ಗೆ ಭೇಟಿ ನೀಡಿ, ಅಲ್ಲಿರುವ ಆಕ್ಸಿಜನ್ ಪೂರೈಕೆಯ ಯಂತ್ರಗಳು, ಕೋವಿಡ್ಗೆ ಚಿಕಿತ್ಸೆ ನೀಡಲು ನೂತನವಾಗಿ ನಿರ್ಮಿಸಲಾಗುತ್ತಿರುವ ಎರಡು ಕೊಠಡಿಗಳು, ಪ್ರಯೋಗಾಲಯಗಳನ್ನು ಪರಿಶೀಲಿಸಿದರು.</p>.<p>ನವೋದಯದಲ್ಲಿ 27 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೂವರೆಗೆ 77 ಸೋಂಕಿತರು ಚಿಕಿತ್ಸೆಪಡೆದಿದ್ದು, 2 ಸಾವುಗಳು ಸಂಭವಿಸಿವೆ ಎಂದು ನವೋದಯದ ಆಸ್ಪತ್ರೆಯ ಮೆಡಿಕಲ್ ಅಧೀಕ್ಷಕ ಅಶೋಕ್ ಮಹೇಂದ್ರಕರ್ ಮಾಹಿತಿ ನೀಡಿದರು.</p>.<p>ಕೋವಿಡ್ಗೆ ಚಿಕಿತ್ಸೆ ನೀಡಲು ಮುಂದೆ ಬಂದಿರುವ ನೀಯೋ ಫಾರ್ಚುನ್, ಲಕ್ಷ್ಮೀ ನಾರಾಯಣ, ಭಂಡಾರಿ ಸೇರಿದಂತೆ ಕೆಲವು ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿಗಳು ಹಾಗೂ ಅಲ್ಲಿ ಚಿಕಿತ್ಸೆ ನೀಡುತ್ತಿರುವ ಕ್ರಮಗಳ ಬಗ್ಗೆ ಮುಂಬರುವ ದಿನಗಳಲ್ಲಿ<br />ಪರಿಶೀಲಿಸಲಾಗುವುದು ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರಿಮ್ಸ್ ಡೀನ್ ಡಾ. ಬಸವರಾಜ ಪೀರಾಪುರ್, ನವೋದಯ ಆಸ್ಪತ್ರೆಯ ಡೀನ್ ಡಾ. ವಿಜಯಚಂದ್ರ, ಮೆಡಿಸಿನ್ ಮುಖ್ಯಸ್ಥ ಡಾ. ಶಂಕರಪ್ಪ, ಅನಸ್ತೇಷಿಯಾ ಮುಖ್ಯಸ್ಥ ಡಾ. ಬಾಲ ರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>