ನದಿಯಲ್ಲಿ ಪ್ರವಾಹ ಸ್ಥಿತಿ ಉದ್ಬವವಾದಲ್ಲಿ ಮುಂಜಾಗ್ರತಾ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಗ್ರಾಮದಲ್ಲಿ ಪರಿಶೀಲಿಸಿದರು, ಗ್ರಾಮಸ್ಥರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಆತ್ಕೂರು, ಕೂರ್ವಕುಲ ಹಾಗೂ ಕುರ್ವಕುಂದದ ಗ್ರಾಮಸ್ಥರು ಅತ್ಯಂತ ಎಚ್ಚರಿಕೆಯಿಂದ ಇರಬೇಕು, ನಡುಗಡ್ಡೆಯಲ್ಲಿರುವ ಗ್ರಾಮಸ್ಥರ ಆರೋಗ್ಯವನ್ನು ಮತ್ತೊಮ್ಮೆ ತಪಾಸಣೆ ನಡೆಸಬೇಕು, ಕೆಮ್ಮು, ಜ್ವರ, ನೆಗಡಿ, ಇತ್ಯಾದಿ ಕಾಯಿಲೆಗಳಿದ್ದರೆ ಕೂಡಲೇ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅಥವಾ ಗ್ರಾಮ ಲೆಕ್ಕಿಗರ ಗಮನಕ್ಕೆ ತರಬೇಕು ಎಂದು ತಿಳಿಸಿದರು.