<p><strong>ರಾಯಚೂರು:</strong>ಕೊರೊನಾ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿರುವುದನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಬುಧವಾರ ನಗರದ ವಿವಿಧೆಡೆ ಸಂಚರಿಸಿ, ಬಡಾವಣೆಗಳಲ್ಲಿ ಕಾಲ್ನಡಿಗೆಯಿಂದ ತೆರಳಿ ಪರಿಶೀಲಿಸಿದರು.</p>.<p>ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಅಗತ್ಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಆದರೆ ಕೆಲ ಯುವಕರು ಅನಾವಶ್ಯಕವಾಗಿ ರಸ್ತೆ ಮೇಲೆ ತಿರುಗಾಡುತ್ತಿರುವವರ ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡು ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ತಿಳಿಸಿದರು.</p>.<p>ತೀನ್ ಖಂದೀಲ್, ಆರ್.ಟಿ ವೃತ್ತ, ಚಂದ್ರಮೌಳೇಶ್ವರ ವೃತ್ತ, ಅಶೋಕ ಡಿಪೋ, ಸ್ಟೇಷನ್ ವೃತ್ತ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಕೊರೊನಾ ಸೋಂಕಿನ ಬಗ್ಗೆ ಜನರು ಭಯ ಪಡೆದೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.</p>.<p>ನಗರದ ರಾಮಮಂದಿರ ಬಳಿಯಿರುವ ಪೆಟ್ರೊಲ್ ಬಂಕ್ಗೆ ಭೇಟಿ ನೀಡಿ ಪಾಸ್ ಇದ್ದವರಿಗೆ ಮಾತ್ರ ಪೆಟ್ರೊಲ್ ಹಾಕುವಂತೆ ಮಾಲಿಕರಿಗೆ ಸೂಚಿಸಿದರು. ಆನಂತರ ಬೇಸ್ತವಾರಪೇಟೆ ಬಡಾವಣೆಗೆ ತೆರಳಿ, ಮನೆಯಿಂದ ಹೊರ ಬರದಂತೆ ಅಲ್ಲಿದ್ದ ಜನರಿಗೆ ಮನವಿ ಮಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಲಾವಿದ ಅಮರೇಗೌಡ ಅವರು ಕೊರೊನಾ ಸೋಂಕಿನ ಬಗ್ಗೆ ಚಿತ್ರ ರಚಿಸಿರುವುದನ್ನು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ಕೊರೊನಾ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿರುವುದನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಬುಧವಾರ ನಗರದ ವಿವಿಧೆಡೆ ಸಂಚರಿಸಿ, ಬಡಾವಣೆಗಳಲ್ಲಿ ಕಾಲ್ನಡಿಗೆಯಿಂದ ತೆರಳಿ ಪರಿಶೀಲಿಸಿದರು.</p>.<p>ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಅಗತ್ಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಆದರೆ ಕೆಲ ಯುವಕರು ಅನಾವಶ್ಯಕವಾಗಿ ರಸ್ತೆ ಮೇಲೆ ತಿರುಗಾಡುತ್ತಿರುವವರ ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡು ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ತಿಳಿಸಿದರು.</p>.<p>ತೀನ್ ಖಂದೀಲ್, ಆರ್.ಟಿ ವೃತ್ತ, ಚಂದ್ರಮೌಳೇಶ್ವರ ವೃತ್ತ, ಅಶೋಕ ಡಿಪೋ, ಸ್ಟೇಷನ್ ವೃತ್ತ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಕೊರೊನಾ ಸೋಂಕಿನ ಬಗ್ಗೆ ಜನರು ಭಯ ಪಡೆದೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.</p>.<p>ನಗರದ ರಾಮಮಂದಿರ ಬಳಿಯಿರುವ ಪೆಟ್ರೊಲ್ ಬಂಕ್ಗೆ ಭೇಟಿ ನೀಡಿ ಪಾಸ್ ಇದ್ದವರಿಗೆ ಮಾತ್ರ ಪೆಟ್ರೊಲ್ ಹಾಕುವಂತೆ ಮಾಲಿಕರಿಗೆ ಸೂಚಿಸಿದರು. ಆನಂತರ ಬೇಸ್ತವಾರಪೇಟೆ ಬಡಾವಣೆಗೆ ತೆರಳಿ, ಮನೆಯಿಂದ ಹೊರ ಬರದಂತೆ ಅಲ್ಲಿದ್ದ ಜನರಿಗೆ ಮನವಿ ಮಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಲಾವಿದ ಅಮರೇಗೌಡ ಅವರು ಕೊರೊನಾ ಸೋಂಕಿನ ಬಗ್ಗೆ ಚಿತ್ರ ರಚಿಸಿರುವುದನ್ನು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>