ಮಸ್ಕಿ (ರಾಯಚೂರು): 'ಕಾಂಗ್ರೆಸ್ ಪಕ್ಷವು ದೀನದಲಿತರಿಗೆ ಮಾಡಿದ ಅನ್ಯಾಯದ ಅರಿವು ಈಗ ಆಗಿದೆ. ಕಾಂಗ್ರೆಸ್ ಪಕ್ಷವನ್ನು ದೇಶದಿಂದ ಮುಕ್ತಗೊಳಿಸಬೇಕೆನ್ನುವ ಬಿಜೆಪಿ ಸಂಕಲ್ಪ ಈಡೇರುತ್ತಿದೆ' ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಮಸ್ಕಿ ಬಿಜೆಪಿ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಡಾ. ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
'ಪರಿಶಿಷ್ಟ ಜಾತಿಯವರು ಬೆಂಬಲಿಸಿದ್ದರಿಂದ ದೇಶದಲ್ಲಿ ಬಿಜೆಪಿ ಶಕ್ತಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ದೇಶ ಕಾಂಗ್ರೆಸ್ ಮುಕ್ತವಾಗಲಿದೆ' ಎಂದರು.