<p><strong>ರಾಯಚೂರು: </strong>ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಡಳಿತದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ಜಿಲ್ಲೆಯಲ್ಲಿನ ಕೆರೆಗಳ ಹೂಳೆತ್ತುವ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೆರೆಗಳ ಹೂಳೆತ್ತುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೆರೆಗಳ ಹೂಳೆತ್ತುವ ಮೊದಲ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, 39 ಕೆರೆಗಳ ಹೂಳೆತ್ತಲಾಗುತ್ತಿದೆ. 9 ಕೆರೆಯ ಹೂಳೆತ್ತುವ ಕಾರ್ಯ ಪ್ರಗತಿಯಲ್ಲಿದ್ದು, ತಾಲ್ಲೂಕಿನ ಕಟ್ಲಟ್ಕೂರು ಹಾಗೂ ಲಿಂಗಸುಗೂರು ತಾಲ್ಲೂಕಿನ ಉಪ್ಪಾರ ನಂದಿಹಾಳ ಕೆರೆಯ ಹೂಳೆತ್ತುವ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದರು.</p>.<p>4.73 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ತೆಗೆಯಲಾಗಿದೆ. ಪ್ರತಿದಿನ 1500 ರಿಂದ 2 ಸಾವಿರ ಟ್ರ್ಯಾಕ್ಟರ್ ಹೂಳು ರೈತರು ಹೊಲಗಳಿಗೆ ಕೊಂಡೊಯ್ಯುತ್ತಿದ್ದಾರೆ. ಈ ಹೂಳಿನಿಂದ ಭೂಮಿಯ ಫತವತ್ತತೆ ಹೆಚ್ಚಾಗಲಿದೆ. ರೈತರ ಸಹಕಾರದಿಂದ ಹೂಳೆತ್ತುವ ಕಾರ್ಯಕ್ಕೆ ಹುರುಪು ಬಂದಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್ ಇದ್ದರು.</p>.<p class="Subhead"><strong>ಕೆರೆಗೆ ಭೇಟಿ:</strong></p>.<p>ತಾಲ್ಲೂಕಿನ ಕಟ್ಲಟ್ಕೂರ್ ಕೆರೆಯ ಹೂಳೆತ್ತುವ ಕಾರ್ಯ ಪರಿಶೀಲಿಸಲು ಜಿಲ್ಲಾಧಿಕಾರಿ ಬಿ.ಶರತ್ ಮತ್ತು ಹಿರಿಯ ಅಧಿಕಾರಿಗಳು ಏಪ್ರಿಲ್ 30ರಂದು ಭೇಟಿ ನೀಡಲಿದ್ದಾರೆ.</p>.<p>ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ, ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಘಟನಾಧಿಕಾರಿ ಅಜಿತ್ ರಾಜ್ ಸಂಚಿತ್, ಕಮಲ್ ಕುಮಾರ್, ಪುಣೆಯ ಕಾರ್ಯಕ್ರಮ ನಿರ್ದೇಶಕ ನಂದಕಿಶೋರ್, ಜಿಲ್ಲಾ ಸಮನ್ವಯಾಧಿಕಾರಿ ಸಂಜಯ್, ಯೋಜನಾ ನಿರ್ದೇಶಕ ಸಂಜಯ್ ಇತರರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಡಳಿತದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ಜಿಲ್ಲೆಯಲ್ಲಿನ ಕೆರೆಗಳ ಹೂಳೆತ್ತುವ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೆರೆಗಳ ಹೂಳೆತ್ತುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೆರೆಗಳ ಹೂಳೆತ್ತುವ ಮೊದಲ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, 39 ಕೆರೆಗಳ ಹೂಳೆತ್ತಲಾಗುತ್ತಿದೆ. 9 ಕೆರೆಯ ಹೂಳೆತ್ತುವ ಕಾರ್ಯ ಪ್ರಗತಿಯಲ್ಲಿದ್ದು, ತಾಲ್ಲೂಕಿನ ಕಟ್ಲಟ್ಕೂರು ಹಾಗೂ ಲಿಂಗಸುಗೂರು ತಾಲ್ಲೂಕಿನ ಉಪ್ಪಾರ ನಂದಿಹಾಳ ಕೆರೆಯ ಹೂಳೆತ್ತುವ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದರು.</p>.<p>4.73 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ತೆಗೆಯಲಾಗಿದೆ. ಪ್ರತಿದಿನ 1500 ರಿಂದ 2 ಸಾವಿರ ಟ್ರ್ಯಾಕ್ಟರ್ ಹೂಳು ರೈತರು ಹೊಲಗಳಿಗೆ ಕೊಂಡೊಯ್ಯುತ್ತಿದ್ದಾರೆ. ಈ ಹೂಳಿನಿಂದ ಭೂಮಿಯ ಫತವತ್ತತೆ ಹೆಚ್ಚಾಗಲಿದೆ. ರೈತರ ಸಹಕಾರದಿಂದ ಹೂಳೆತ್ತುವ ಕಾರ್ಯಕ್ಕೆ ಹುರುಪು ಬಂದಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್ ಇದ್ದರು.</p>.<p class="Subhead"><strong>ಕೆರೆಗೆ ಭೇಟಿ:</strong></p>.<p>ತಾಲ್ಲೂಕಿನ ಕಟ್ಲಟ್ಕೂರ್ ಕೆರೆಯ ಹೂಳೆತ್ತುವ ಕಾರ್ಯ ಪರಿಶೀಲಿಸಲು ಜಿಲ್ಲಾಧಿಕಾರಿ ಬಿ.ಶರತ್ ಮತ್ತು ಹಿರಿಯ ಅಧಿಕಾರಿಗಳು ಏಪ್ರಿಲ್ 30ರಂದು ಭೇಟಿ ನೀಡಲಿದ್ದಾರೆ.</p>.<p>ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ, ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಘಟನಾಧಿಕಾರಿ ಅಜಿತ್ ರಾಜ್ ಸಂಚಿತ್, ಕಮಲ್ ಕುಮಾರ್, ಪುಣೆಯ ಕಾರ್ಯಕ್ರಮ ನಿರ್ದೇಶಕ ನಂದಕಿಶೋರ್, ಜಿಲ್ಲಾ ಸಮನ್ವಯಾಧಿಕಾರಿ ಸಂಜಯ್, ಯೋಜನಾ ನಿರ್ದೇಶಕ ಸಂಜಯ್ ಇತರರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>