<p><strong>ಮಸ್ಕಿ</strong>: ಸಾವಿನ ಬಳಿಕ ತನ್ನ ದೇಹವನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡುವ ಮೂಲಕ ಸ್ಥಳೀಯ ನಿವಾಸಿ, ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ನೌಕರ ಬಸ್ಸಣ್ಣ ಸಿರವಾರ ಸಾರ್ಥಕತೆ ಮೆರೆದಿದ್ದಾರೆ.</p>.<p>ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಸ್ಸಣ್ಣ ಸಿರವಾರ (89) ಅವರನ್ನು ಬೆಂಗಳೂರಿನಲ್ಲಿರುವ ಅವರ ಪುತ್ರ ಎಸ್.ಮಲ್ಲಿಕಾರ್ಜುನ ಅವರು ವಾರದ ಹಿಂದೆಯಷ್ಟೇ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದರು.</p>.<p>ಜು.15 ರಂದು (ಮಂಗಳವಾರ) ಅವರು ಮೃತಪಟ್ಟಿದ್ದಾರೆ. ಸಾವಿನ ನಂತರ ತನ್ನ ಮೃತ ದೇಹವನ್ನು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿಗೆ ನೀಡುವಂತೆ ಬಸ್ಸಣ್ಣ ಸಿರವಾರ ಹೇಳಿದ್ದರು.</p>.<p>ಬೆಂಗಳೂರಿನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬಸ್ಥರು ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಜತೆ ಚರ್ಚಿಸಿ ತಂದೆಯ ಆಸೆಯಂತೆ ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿಗೆ ಮೃತ ದೇಹವನ್ನು ಹಸ್ತಾಂತರಿಸಲಾಗಿದೆ ಎಂದು ಅವರ ಪುತ್ರ ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.</p>.<p>ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಸಾವಿನ ಬಳಿಕ ತನ್ನ ದೇಹವನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡುವ ಮೂಲಕ ಸ್ಥಳೀಯ ನಿವಾಸಿ, ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ನೌಕರ ಬಸ್ಸಣ್ಣ ಸಿರವಾರ ಸಾರ್ಥಕತೆ ಮೆರೆದಿದ್ದಾರೆ.</p>.<p>ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಸ್ಸಣ್ಣ ಸಿರವಾರ (89) ಅವರನ್ನು ಬೆಂಗಳೂರಿನಲ್ಲಿರುವ ಅವರ ಪುತ್ರ ಎಸ್.ಮಲ್ಲಿಕಾರ್ಜುನ ಅವರು ವಾರದ ಹಿಂದೆಯಷ್ಟೇ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದರು.</p>.<p>ಜು.15 ರಂದು (ಮಂಗಳವಾರ) ಅವರು ಮೃತಪಟ್ಟಿದ್ದಾರೆ. ಸಾವಿನ ನಂತರ ತನ್ನ ಮೃತ ದೇಹವನ್ನು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿಗೆ ನೀಡುವಂತೆ ಬಸ್ಸಣ್ಣ ಸಿರವಾರ ಹೇಳಿದ್ದರು.</p>.<p>ಬೆಂಗಳೂರಿನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬಸ್ಥರು ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಜತೆ ಚರ್ಚಿಸಿ ತಂದೆಯ ಆಸೆಯಂತೆ ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿಗೆ ಮೃತ ದೇಹವನ್ನು ಹಸ್ತಾಂತರಿಸಲಾಗಿದೆ ಎಂದು ಅವರ ಪುತ್ರ ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.</p>.<p>ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>